ನಾಳೆಯಿಂದ ಎರಡು ದಿನಗಳ ಕಾಲ ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಸರಳವಾಗಿ ಆಚರಿಸಲು ಸಿದ್ಧತೆ ನಡೆದಿದೆ. ಭಕ್ತರಿಗೆ ಪ್ರಸಾದವಾಗಿ ವಿತರಿಸಲು 40 ಸಾವಿರ ಚಕ್ಕುಲಿ ಮತ್ತು 80 ಸಾವಿರ ನಾನಾ ರೀತಿಯ ಉಂಡೆಗಳನ್ನು ತಯಾರಿಸಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂದು ಪರ್ಯಾಯ ಅದಮಾರು ಮಠದ ಮೂಲಗಳು ಹೇಳಿವೆ.
ಧಾರ್ಮಿಕ ವಿಧಿ-ವಿಧಾನಗಳು ಪ್ರತಿ ವರ್ಷದಂತೆ ನಡೆಯಲಿದೆ. ಆ. 30 ರ ಬೆಳಗ್ಗೆಯಿಂದಲೇ ಭಕ್ತರು ಉಪವಾಸ ವ್ರತದಲ್ಲಿರುತ್ತಾರೆ. ಮಧ್ಯರಾತ್ರಿ 12.17 ಕ್ಕೆ ಶ್ರೀ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುತ್ತೆ.
31 ರಂದು ರಥ ಬೀದಿಯಲ್ಲಿ ಶ್ರೀ ಕೃಷ್ಣನ ಲೀಲೋತ್ಸವ ನಡೆಯಲಿದೆ.
ರಥ ಬೀದಿಯಲ್ಲಿ ಗೊಲ್ಲ ವೇಷಧಾರಿಗಳು ಮಡಕೆ ಒಡೆಯಲಿದ್ದಾರೆ. ಕೃಷ್ಣ ಲೀಲೋತ್ಸವ ಕಾರ್ಯಕ್ರಮಕ್ಕೆ ರಥಬೀದಿಗೆ ಭಕ್ತರಿಗೆ ಪ್ರವೇಶ ಇಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
ಕೃಷ್ಣ ಮಠ, ಪರ್ಯಾಯ ಅದಮಾರು ಮಠ ಹಾಗೂ ಅಷ್ಟ ಮಠಗಳ ಸ್ವಾಮೀಜಿ ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು