ಹಿರಿಯ ರಂಗಭೂಮಿ ಕಲಾವಿದ, ಚಿತ್ರಗಳಲ್ಲಿ ವಿಶಿಷ್ಟ ಅಭಿನಯ ನೀಡಿ ತಮ್ಮದೇ ಛಾಪು ಮೂಡಿಸಿದ ಕೃಷ್ಣೇ ಗೌಡರು (80) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಒಂದು ತಿಂಗಳ ಹಿಂದೆ ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆ ಸೇರಿದ್ದ ಕೃಷ್ಣೇ ಗೌಡರಿಗೆ ಕೊರೊನಾ ವಾಸಿಯಾಗಿ ನೆಗೆಟಿವ್ ದೃಢಪಟ್ಟಿತ್ತು.
ಕೊರೊನಾ ಸಂಪೂರ್ಣವಾಗಿ ಗುಣಮುಖವಾಗಿದ್ದರೂ ನಂತರ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣೇಗೌಡರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಇಂದು ಬೆಳಗಿನ ಜಾವ ಕೃಷ್ಣೇಗೌಡರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಲವಾರು ಚಿತ್ರ,ಧಾರಾವಾಹಿ ಹಾಗೂ ಸಾಕ್ಷ್ಯಚಿತ್ರ ಗಳಲ್ಲಿ ಅಭಿನಯಿಸಿರುವ ಕೃಷ್ಣೇ ಗೌಡರು, ಹಲವಾರು ವರ್ಷಗಳ ಕಾಲ ಚಲನ ಚಿತ್ರ ಕಲಾವಿದರ ಸಂಘದ ಖಜಾಂಚಿ ಆಗಿ ಸೇವೆ ಸಲ್ಲಿಸಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ