ರಸ್ತೆ ಗುಂಡಿಯಿಂದಾಗಿ ಬೆಂಗಳೂರಿನಲ್ಲಿ ಸಂಬಂವಿಸಿದ ಭೀಕರ ಅಪಘಾತ 25 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಮೈಸೂರು ರೋಡ್ ನಲ್ಲಿ ಮೆಟ್ರೋ ಪಿಲ್ಲರ್ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ರೋಡ್ನ ಪೂರ್ಣಿಮಾ ಪ್ಯಾಲೇಸ್ ಬಳಿ ದುರ್ಘಟನೆ ನಡೆದಿದೆ.
ಕೆಆರ್ ನಗರ ಡಿಪೋಗೆ ಸೇರಿದ ಬಸ್ಸಿನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು.ಗುಂಡಿಗೆ ಇಳಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಮೆಟ್ರೋ ಪಿಲ್ಲರ್ ಇಲ್ಲದೇ ಇದಿದ್ರೇ ಬಸ್ ಮತ್ತೊಂದು ಭಾಗದ ರಸ್ತೆಗೆ ಹೋಗಿ ದೊಡ್ಡ ಅನಾಹುತವೇ ಆಗಿ ಹೋಗ್ತಿತ್ತು. ನಾಲ್ಕು ಅಡಿಯ ತಡೆಗೋಡೆಗೆ ಗುದ್ದಿ ಕೊನೆಗೆ ಪಿಲ್ಲರ್ ನಂಬರ್ 545 ಗೆ ಬಸ್ ಗುದ್ದಿದೆ.
ಪಿಲ್ಲರ್ ನಂಬರ್ 546 ಬಳಿ ದೊಡ್ಡ ಗುಂಡಿ ಬಿದ್ದಿದೆ. ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಇಲ್ಲವೇ ಗುಂಡಿಗೆ ಇಳಿದ ಬಸ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಘಟನೆಯಿಂದ ಚಾಲಕ ಬಿಜೆ ಮಂಜುನಾಥ್ ಹಾಗೂ ಕಂಡೆಕ್ಟರ್ ವೆಂಕಟರಮಣ ಅವರಿಗೆ ಗಾಯಗಳಾಗಿದ್ದು, ಇಬ್ಬರನ್ನೂ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment