KSRTCಗೆ ಒಟ್ಟು 1000 ಹೊಸ ಬಸ್ಗಳು ಬರಲಿದ್ದು, ಮೊದಲ ಹಂತದಲ್ಲಿ 100 ಹೊಸ ಕ್ಲಾಸಿಕ್ ಬಸ್ಗಳು ಬಂದಿವೆ. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ ಬಸ್ಗಳಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸೋಮವಾರ ಚಾಲನೆ ನೀಡಿದರು. ಅಶ್ವಮೇಧ ಬಸ್ಗೆ ಚಾಲನೆ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.
ಅಶ್ವಮೇಧ ಕ್ಲಾಸಿಕ್ ಬಸ್ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್ಪ್ರೆಸ್ ಬಸ್ಸುಗಳಾಗಿವೆ. ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ KSRTC ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಇದೀಗ ಅಶ್ವಮೇಧ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.ವಾಹನ ಸವಾರರಿಗೆ ರಸ್ತೆ ಬಿಡದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್
ಸದ್ಯ 100 ಬಸ್ಗಳಿಗೆ ಚಾಲನೆ ನೀಡಲಾಗಿದ್ದು, ಇವು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಿಗೆ ಕಾರ್ಯಾಚರಣೆ ಆರಂಭಿಸಲಿವೆ. ಮುಂದಿನ ದಿನಗಳಲ್ಲಿ ಒಟ್ಟು ಸಾವಿರ ಅಶ್ವಮೇಧ ಬಸ್ಗಳು ಕೆಎಸ್ಆರ್ಟಿಸಿಗೆ ಬರಲಿದ್ದು, ರಾಜ್ಯದಾದ್ಯಂತ ಕಾರ್ಯಾಚರಣೆ ಆರಂಭಿಸಲಿವೆ.
ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More
ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More
ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್. ಮತ್ತು ಕೆ.ಎ.ಎಸ್ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More
ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More
ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು… Read More
ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More
This website uses cookies.
Leave a Comment