ನೀವು ಈಗ ರಾಷ್ಟ್ರೀಯ ಪಕ್ಷದ ನೆರಳಿನಲ್ಲಿ ಇದ್ದೀರಾ. ತಾಕತ್ತು ಇದ್ದರೆ ಪ್ರಾದೇಶಿಕ ಪಕ್ಷ ಕಟ್ಟಿ 10 ಸ್ಥಾನ ಗೆದ್ದು ತೋರಿಸಿ ಎಂದು ಸಿದ್ದರಾಮಯ್ಯ ನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ನಿನ್ನೆ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿದ ಮಾತುಗಳಿಗೆ ಟ್ವಿಟರ್ ನಲ್ಲಿ ತಿರುಗೇಟು ನೀಡಿರುವ ಕುಮಾರಸ್ವಾಮಿ, ಜೆಡಿಎಸ್ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯ ನನ್ನ ಸವಾಲು ಸ್ವೀಕರಿಸಲಿ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ನವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿ ಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಆದರೆ, ಒಳ ಒಪ್ಪಂದದ ಆರೋಪ, ನಾನು ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ಸಿದ್ದು ಅವರ ದ್ವಂದ್ವದ ಬಗ್ಗೆ ಮಾತಾಡುವೆ ಎಂದಿದ್ದಾರೆ.
ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿದ ಬಳಿಕ ಜೆಡಿಎಸ್ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ ಎಂದು ಟಾಂಗ್ ನೀಡಿದ್ದಾರೆ.
ರಾಜಕೀಯ ಒಳಒಪ್ಪಂದಗಳ ಜನಕ
ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳ ಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ ಎಂಬುದನ್ನು ಮರೆಯಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇನ್ನೆಂದು ಜೆಡಿಎಸ್ನ ಸ್ಥಾನಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು