ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ?

Team Newsnap
1 Min Read

ಮಂಡ್ಯ : ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಒಕ್ಕೂಟ ಸೀಟು ಹಂಚಿಕೆಯ ಮಾತುಕತೆ ನಡೆಸುತ್ತಿದ್ದು ,ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ (JDS) ಫಿಕ್ಸ್ ಎಂದು ಹೇಳಲಾಗುತ್ತಿದೆ . ಹಾಲಿ ಸಂಸದೆ ಸುಮಲತಾ ಅವರು ಬಿಜೆಪಿ (BJP) ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ನಿನ್ನೆ ನಡೆದ ಸಭೆಯಲ್ಲೂ ಮಂಡ್ಯದಿಂದ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯಿಸಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಅವರು ಮಾರ್ಚ್ 10 ರಂದು ಸೀಟು ಹಂಚಿಕೆ ವಿಚಾರವಾಗಿ ದೆಹಲಿಗೆ ತೆರಳಲಿದ್ದು , ಬಿಜೆಪಿ ನಾಯಕರ ಜೊತೆ ಸಭೆಯಲ್ಲಿ ಮಾತುಕತೆ ನಾಡೆಸಿ ಮಂಡ್ಯ, ಹಾಸನ ಕೋಲಾರ ಕ್ಷೇತ್ರಗಳ ಜೊತೆಗೆ ಹೆಚ್ಚುವರಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ.

ಬಿಜೆಪಿ ನಾಯಕರು ಚಾಮರಾಜನಗರ ಲೋಕಸಭಾ ಕ್ಷೇತ್ರ ಬಿಟ್ಟುಕೊಡಲು ನಕಾರ ವ್ಯಕ್ತಪಡಿಸಿದ್ದು ,ಈಗಾಗಲೇ ಪ್ರಾಥಮಿಕ ಹಂತದ ಮಾತುಕತೆ ನಡೆಸಲಾಗಿದೆ.

ಎಚ್ ಡಿ ಕೆ ಮಂಡ್ಯದಿಂದ ಸ್ಪರ್ಧಿಸಲು ಒತ್ತಾಯ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹೆಚ್​ಡಿ ಕುಮಾರಸ್ವಾಮಿಗೆ ಸ್ಪರ್ಧೆಗೆ ಮತ್ತೆ ಒತ್ತಾಯಿಸಲಾಗಿದ್ದು ,ಈ ಬಗ್ಗೆ ಅಷ್ಟಾಗಿ ಒಲವು ತೋರದ ಕುಮಾರಸ್ವಾಮಿ, ಅಭ್ಯರ್ಥಿ ಆಯ್ಕೆ ಸಂಬಂಧ ಎಲ್ಲಾ ತೊಡಕುಗಳನ್ನ ನಿವಾರಿಸುವ ಹಾಗೂ ಪಕ್ಷದ ನಾಯಕರ ನಡುವಿನ ಸಣ್ಣಪುಟ್ಟ ಭಿನ್ನಮತ ನಿವಾರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಕುಮಾರಸ್ವಾಮಿ ಎಲ್ಲಾ ನಾಯಕರ ಅಭಿಪ್ರಾಯ ಪಡೆದು , ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಂದಿರುವ ಪುಟ್ಟರಾಜು

puttaraju

ಮಾಜಿ ಸಚಿವ ಪುಟ್ಟರಾಜು ಹೆಸರು ಮಂಡ್ಯ ಕ್ಷೇತ್ರದ ಅಭ್ಯರ್ಥಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಮತ್ತೊಂದೆಡೆ ಬಿಜೆಪಿ ಹೈಕಮಾಂಡ್​ನಿಂದ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಬಂದರೆ ಮುಂದಿನ‌ ನಿರ್ಧಾರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ.ಪ್ರಧಾನಿ ಮೋದಿಯಿಂದ ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋ ಮಾರ್ಗ ಉದ್ಘಾಟನೆ

ಜೆಡಿಎಸ್ ನಾಯಕರು ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿಟ್ಟುಕೊಳ್ಳುವಂತೆ ಮನವಿ ಮಾಡಿದ್ದು , ಜೆಪಿ ನಾಯಕರ ಜೊತೆಗಿನ ಮಾತುಕತೆ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Share This Article
Leave a comment