Karnataka

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ?

ಮಂಡ್ಯ : ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಒಕ್ಕೂಟ ಸೀಟು ಹಂಚಿಕೆಯ ಮಾತುಕತೆ ನಡೆಸುತ್ತಿದ್ದು ,ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್​ಗೆ (JDS) ಫಿಕ್ಸ್ ಎಂದು ಹೇಳಲಾಗುತ್ತಿದೆ . ಹಾಲಿ ಸಂಸದೆ ಸುಮಲತಾ ಅವರು ಬಿಜೆಪಿ (BJP) ಟಿಕೆಟ್​ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ನಿನ್ನೆ ನಡೆದ ಸಭೆಯಲ್ಲೂ ಮಂಡ್ಯದಿಂದ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯಿಸಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಅವರು ಮಾರ್ಚ್ 10 ರಂದು ಸೀಟು ಹಂಚಿಕೆ ವಿಚಾರವಾಗಿ ದೆಹಲಿಗೆ ತೆರಳಲಿದ್ದು , ಬಿಜೆಪಿ ನಾಯಕರ ಜೊತೆ ಸಭೆಯಲ್ಲಿ ಮಾತುಕತೆ ನಾಡೆಸಿ ಮಂಡ್ಯ, ಹಾಸನ ಕೋಲಾರ ಕ್ಷೇತ್ರಗಳ ಜೊತೆಗೆ ಹೆಚ್ಚುವರಿಯಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಬೇಡಿಕೆ ಇಡುವ ಸಾಧ್ಯತೆ ಇದೆ.

ಬಿಜೆಪಿ ನಾಯಕರು ಚಾಮರಾಜನಗರ ಲೋಕಸಭಾ ಕ್ಷೇತ್ರ ಬಿಟ್ಟುಕೊಡಲು ನಕಾರ ವ್ಯಕ್ತಪಡಿಸಿದ್ದು ,ಈಗಾಗಲೇ ಪ್ರಾಥಮಿಕ ಹಂತದ ಮಾತುಕತೆ ನಡೆಸಲಾಗಿದೆ.

ಎಚ್ ಡಿ ಕೆ ಮಂಡ್ಯದಿಂದ ಸ್ಪರ್ಧಿಸಲು ಒತ್ತಾಯ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹೆಚ್​ಡಿ ಕುಮಾರಸ್ವಾಮಿಗೆ ಸ್ಪರ್ಧೆಗೆ ಮತ್ತೆ ಒತ್ತಾಯಿಸಲಾಗಿದ್ದು ,ಈ ಬಗ್ಗೆ ಅಷ್ಟಾಗಿ ಒಲವು ತೋರದ ಕುಮಾರಸ್ವಾಮಿ, ಅಭ್ಯರ್ಥಿ ಆಯ್ಕೆ ಸಂಬಂಧ ಎಲ್ಲಾ ತೊಡಕುಗಳನ್ನ ನಿವಾರಿಸುವ ಹಾಗೂ ಪಕ್ಷದ ನಾಯಕರ ನಡುವಿನ ಸಣ್ಣಪುಟ್ಟ ಭಿನ್ನಮತ ನಿವಾರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಕುಮಾರಸ್ವಾಮಿ ಎಲ್ಲಾ ನಾಯಕರ ಅಭಿಪ್ರಾಯ ಪಡೆದು , ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಂದಿರುವ ಪುಟ್ಟರಾಜು

ಮಾಜಿ ಸಚಿವ ಪುಟ್ಟರಾಜು ಹೆಸರು ಮಂಡ್ಯ ಕ್ಷೇತ್ರದ ಅಭ್ಯರ್ಥಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಮತ್ತೊಂದೆಡೆ ಬಿಜೆಪಿ ಹೈಕಮಾಂಡ್​ನಿಂದ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಬಂದರೆ ಮುಂದಿನ‌ ನಿರ್ಧಾರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ.ಪ್ರಧಾನಿ ಮೋದಿಯಿಂದ ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋ ಮಾರ್ಗ ಉದ್ಘಾಟನೆ

ಜೆಡಿಎಸ್ ನಾಯಕರು ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿಟ್ಟುಕೊಳ್ಳುವಂತೆ ಮನವಿ ಮಾಡಿದ್ದು , ಜೆಪಿ ನಾಯಕರ ಜೊತೆಗಿನ ಮಾತುಕತೆ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Team Newsnap
Leave a Comment

Recent Posts

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024