Mandya

ಮದ್ದೂರಿನಲ್ಲಿ ಅದ್ದೂರಿಯಾಗಿ ತೆರೆ ಕಂಡ KUWJ ಸರ್ವ ಸದಸ್ಯರ ಸಭೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ( KUWJ ) ವಾರ್ಷಿಕ ಮಹಾಸಭೆಯು ಮಂಡ್ಯ ಜಿಲ್ಲೆ ಮದ್ದೂರಿನ ವೆಂಕಟೇಶ್ವರ ಕಲ್ಯಾಣ ಮಂಟಪ ದಲ್ಲಿ ಮಂಗಳವಾರ ಅದ್ದೂರಿಯಾಗಿ ತೆರೆ ಕಂಡಿತು.

ಬೆಳಗ್ಗೆ ಕಾರ್ಯಕ್ರಮಕ್ಕೂ ಮುನ್ನ ಹೊರ ಜಿಲ್ಲೆಗಳಿಂದ ಬಂದಿದ್ದ ಪತ್ರಕರ್ತರ ಆತಿಥ್ಯ ನೀಡಲು ಸ್ವಾಗತಕ್ಕಾಗಿ ಜನಪದ ಶೈಲಿಯ ಮೆರವಣಿಗೆಯೊಂದಿಗೆ ಕಾರ್ಯಕ್ರಮ ನಡೆಯುವ ಸಭಾಂಗಣದವರೆಗೆ ಸ್ವಾಗತಿಸಲಾಯಿತು.

ವಾರ್ಷಿಕ ಮಹಾ ಸಭೆಯನ್ನು ಮದ್ದೂರು ಕ್ಷೇತ್ರದ ಶಾಸಕ ಡಿ.ಸಿ. ತಮಣ್ಣ ನವರು ಉದ್ಘಾಟಿಸಿ ಮಾತನಾಡಿ, ನಮ್ಮ ಜಿಲ್ಲೆಯ ನಮ್ಮ ತಾಲೂಕಿನ ಪ್ರವಾಸಿ ತಾಣಗಳನ್ನು ನೋಡುವ ಆಕರ್ಷಣೀಯ ಕೇಂದ್ರವಾಗಿರುವುದು ಜೊತೆಗೆ ತಮ್ಮಗಳ ವಿಚಾರ ಮಂಡನೆಯ ಮಹಾಸಭೆಗೆ ಆಗಮಿಸಿದ್ದೀರಿ. ನಿಮ್ಮಗಳ ಅತಿಥಿ ಸತ್ಕಾರ ಮಾಡುವುದು ನನಗೆ ಸಿಕ್ಕಿರುವ ಅದೃಷ್ಟ ತಿಳಿಸಿದರು.

ಪತ್ರಕರ್ತರ ಸರ್ವಸದಸ್ಯರ ಆಗಮಿಸಿರುವ ಪತ್ರಕರ್ತರಿಗೆ ಕಾಲ ಅವಕಾಶವಿದ್ದರೆ ಒಂದು ದಿನದ ಪ್ರವಾಸಿ ತಾಣಗಳು ಪರಿಚಯ ಮಾಡಿಕೊಡುವ ಭರವಸೆ ನೀಡಿದರು.
ತಮ್ಮ ಅಧಿಕಾರ ಅವಧಿಯಲ್ಲಿ ಮದ್ದೂರಿನ ಅಭಿವೃದ್ಧಿಯ ಯೋಜನೆಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು ಈ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಶುಭ ಕೋರುತ್ತಾ ಕಾರ್ಯಕ್ರಮಕ್ಕೆ ಯಶಸ್ವಿಯಾಗಲಿ ಎಂದು ಹಾರೈಸಿದರು.

ಪತ್ರಕರ್ತರ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಭೆಯ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಮಲ್ಲಿಕಾರ್ಜುನಯ್ಯ , ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಂ ರಾಜ್ಯ ಸಂಘದ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ನವೀನ್ ಚಿಕ್ಕ ಮಂಡ್ಯ ಸಂಘದ ಪದಾಧಿಕಾರಿಗಳು ಕಾರ್ಯಕ್ರಮ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ವಾರ್ಷಿಕ ಮಹಾಸಭೆಯ ವರದಿಯನ್ನು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಯಿತು ಪತ್ರಕರ್ತರ ಸಮಸ್ಯೆಗಳ ಪ್ರಶ್ನೆಗಳಿಗೆ ಹಾಗೂ ಕಾರ್ಯರೂಪಕ್ಕೆ ತರುವುದನ್ನು ಸಭೆಯಲ್ಲಿ ಚರ್ಚಿಸಿ ಕಾರ್ಯರೂಪಕ್ಕೆ ತರುವ ಭರವಸೆಯನ್ನು ರಾಜ್ಯಾಧ್ಯಕ್ಷರು ಸಭೆಯಲ್ಲಿ ತಿಳಿಸಿದರು.

ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಸರ್ವ ಸದಸ್ಯರಿಗೂ ಉಚಿತವಾಗಿ ಎಳೆನೀರು, ಮಜ್ಜಿಗೆ, ಕಬ್ಬಿನ ಹಾಲು, ಟಿ ಪ್ರಿಯರಿಗೆ ಟಿ ಹಾಗೂ ಸಮಾರಂಭದಲ್ಲಿ ಮದ್ದೂರು ವಡೆಯನ್ನು ವಿತರಿಸಲಾಯಿತು

Team Newsnap
Leave a Comment
Share
Published by
Team Newsnap

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024