ಟಿಎಸ್ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರದಾನ ಮಾಡಲು ಕೆಯುಡಬ್ಲ್ಯೂಜೆ ಒತ್ತಾಯ

Team Newsnap
1 Min Read
Congress leaders who day dream of power - CM ಅಧಿಕಾರದ ಹಗಲು ಕನಸು ಕಾಣುವ ಕಾಂಗ್ರೆಸ್ ನಾಯಕರು - ಸಿಎಂ

ನಾಡಿನ ಹೆಸರಾಂತ ಪತ್ರಕರ್ತರಾದ ಟಿಎಸ್ಆರ್ ಮತ್ತು ಮೊಹರೆ ಹಣಮಂತರಾಯ ಹೆಸರಿನಲ್ಲಿ ಹಿರಿಯ ಪತ್ರಕರ್ತರಿಗೆ ವಾರ್ತಾ ಇಲಾಖೆ ನೀಡುವ ಪ್ರಶಸ್ತಿ 3 ವರ್ಷದಿಂದ ಯಾರಿಗೂ ಪ್ರದಾನ ಮಾಡಿಲ್ಲ. ಕೂಡಲೇ ಪ್ರದಾನ ಮಾಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಒತ್ತಾಯಿಸಿದೆ.

ಪತ್ರಿಕೋದ್ಯಮದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದ್ದು, ಪ್ರಶಸ್ತಿಗೆ ಆಯ್ಕೆಯನ್ನು ಮಾಡಲಾಗಿದೆ.

ಆದರೂ ಈ ತನಕ ಪ್ರದಾನ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪತ್ರ ಬರೆದು ಗಮನ ಸೆಳೆದಿದ್ದಾರೆ.ಭಾರತಕ್ಕೆ 5 ರನ್‍ಗಳ ರೋಚಕ ಗೆಲುವು – ಭಾರತದ ಸೆಮಿಫೈನಲ್ ನತ್ತ ಹೆಜ್ಜೆ

ಕೂಡಲೇ ದಿನಾಂಕ ನಿಗದಿ ಮಾಡಿ ತಾವು ಪ್ರಶಸ್ತಿಯನ್ನು ಪ್ರದಾನ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Share This Article
Leave a comment