86 ವಸಂತಕಂಡ ಪತ್ರಕರ್ತ ಪ್ರಹ್ಲಾದ ಕುಳಲಿರವರಿಗೆ ಕೆಯುಡಬ್ಲ್ಯೂಜೆ ಗೌರವ

Team Newsnap
2 Min Read
KUWJ Tribute to 86 Vasantkanda Journalist Prahlad Kulali 86 ವಸಂತಕಂಡ ಪತ್ರಕರ್ತ ಪ್ರಹ್ಲಾದ ಕುಳಲಿರವರಿಗೆ ಕೆಯುಡಬ್ಲ್ಯೂಜೆ ಗೌರವ
  • ರಿಪೋರ್ಟ್‌ರ್ಸ್ ಗಿಲ್ಡ್‌ ಮೊದಲ ಪ್ರಧಾನ ಕಾರ್ಯದರ್ಶಿ ಕುಳಲಿ
  • ಆತ್ಮಸಾಕ್ಷಿ ವಿರುದ್ಧ ಪತ್ರಕರ್ತರು ಕೆಲಸ ಮಾಡದಿರಲು ಕುಳಲಿ ಕರೆ

ಪತ್ರಕರ್ತರು ಆತ್ಮ ಸಾಕ್ಷಿಯ ವಿರುದ್ದವಾಗಿ ಕೆಲಸ ಮಾಡಿ ವೃತ್ತಿಗೆ ಕಳಂಕ ತರಬಾರದು. ತಮ್ಮ ವೃತ್ತಿಯಲ್ಲಿ ಮಾಡುವ ಕೆಲಸವು ಅವರ ಮನಸಾಕ್ಷಿ ಒಪ್ಪುವಂತಿರಬೇಕು ಎಂದು ಹಿರಿಯ ಪತ್ರಕರ್ತ ಪ್ರಹ್ಲಾದ ಕುಳಲಿ ಅಭಿಪ್ರಾಯಪಟ್ಟರು.ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಸೊಂಡೂರು ಬಳಿ ತುರ್ತು ಭೂ ಸ್ಷರ್ಶ

75ನೇ ಸ್ವಾತಂತ್ರ್ಯೋತ್ಸ ಸಲುವಾಗಿ ಕೆಯುಡಬ್ಲ್ಯೂಜೆ ಹಿರಿಯ ಪತ್ರಕರ್ತರನ್ನು ಗೌರವಿಸುವ “ಮನೆಯಂಗಳದಲ್ಲಿ ಮನತುಂಬಿ ನಮನ” ಕಾರ್ಯಕ್ರಮದಲ್ಲಿ ಪ್ರಹ್ಲಾದ ಕುಳಲಿ ಅವರು ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟರು.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸಂಪಾದಕರಾಗಿದ್ದ ಮೊಹರೆ ಹನುಮಂತರಾಯರ ಗರಡಿಯಲ್ಲಿ ಪಳಗಿದ ಪ್ರಹ್ಲಾದ ಕುಳಲಿಯವರು 4 ದಶಕಗಳ ಕಾಲ ಒಂದೇ ಪತ್ರಿಕೆಯಲ್ಲಿ ಕೆಲಸ ಮಾಡಿದ ಹೆಗ್ಗಳಿಕೆಗೆ ಪಾತ್ರರಾದ ಕುಳಲಿ ಅವರು, ಸಚ್ಚಾರಿತ್ರ್ಯದ ಪತ್ರಕರ್ತ ಎಂದು ಗುರುತಿಸಿಕೊಂಡಿದ್ದಕ್ಕೆ ಇವರು ಮುಖ್ಯಮಂತ್ರಿಗಳಾಗಿದ್ದ ಗುಂಡೂರಾವ್ ಅವರ ಒಡನಾಟದಲ್ಲಿರುವ ಅವಕಾಶ ಲಭಿಸಿತ್ತು‌ ಎಂದರು.

ಸುದ್ದಿ ಮನೆ ಒಳಗಡೆ ಅನೇಕ ಏಳು- ಬೀಳುಗಳನ್ನು ಕಂಡ ಇವರು ತಮ್ಮ ವೃತ್ತಿ ಬದ್ಧತೆ ಬಿಡದೆ ಕಿರಿಯ ಪತ್ರಕರ್ತರಿಗೆ ಪ್ರೇರಣೆಯಾಗುವ ನಿಟ್ಟಿನಲ್ಲಿ ಕೆಲಸ ಮಾಡಿದ್ದನ್ನು ಯಾರೂ ಮರೆಯುವಂತಿಲ್ಲ ಎಂದರು.

ರಿಪೋಟರ್ಸ್ ಗೀಲ್ಡ್ ( ವರದಿಗಾರರ ಕೂಟ) ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಇವರು ಪತ್ರಕರ್ತರ ಸಂಘಟನೆಯಲ್ಲಿ ಒಡನಾಟ ಇಟ್ಟು ಕೊಂಡಿದ್ದರು ಎಂದರು.

ವೃತ್ತಿ ಬದ್ದತೆಯನ್ನು ತಮ್ಮ ಅವಧಿಯಲ್ಲಿ ಕಾಪಾಡಿಕೊಂಡು ಬಂದ 86 ರ ಇಳಿ ವಯಸ್ಸಿನ ಸರಳ ಜೀವನದ ಹಿರಿಯ ಪತ್ರಕರ್ತರಾದ ಪ್ರಹ್ಲಾದ ಕುಳಲಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲು ಹೆಮ್ಮೆ ಎನಿಸುತ್ತದೆ ಎಂದರು.

ಕೆಯುಡಬ್ಲ್ಯೂಜೆ ಮಾಜಿ ಅಧ್ಯಕ್ಷ ಎಚ್. ಎಸ್.ಸುಧೀಂದ್ರಕುಮರ್ ಮಾತನಾಡಿ, ಕೆಯುಡಬ್ಲ್ಯೂಜೆ ದೊಡ್ಡ ಆಲದಮರವಿದ್ದಂತೆ. ಸ್ವಾರ್ಥ ಕಾರಣದಿಂದ ದೂರ ಸರಿದವರು ಹೊಟ್ಟೆ ಕಿಚ್ಚಿನಿಂದ ಮಾತನಾಡುವುದು ತಪ್ಪು. ಸಂಘಟನೆ ಮುಖ್ಯವಾದಾಗ ಮಾತ್ರ ಪತ್ರಕರ್ತರು ಆ ಮೂಲಕ ಹೋರಾಟದಿಂದ ಸೌಲಭ್ಯ ಪಡೆದುಕೊಳ್ಳಲು ಸಾಧ್ಯ ಎಂದು ಹೇಳಿದರು.
ಶಿವಾನಂದ ತಗಡೂರು ಅಧ್ಯಕ್ಷರಾದ ಮೇಲೆ ನೊಂದಂತ ಬಹಳಷ್ಟು ಪತ್ರಕರ್ತರಿಗೆ ಪರಿಹಾರ ಕೊಡಿಸುವ ಮೂಲಕ ನೆರವಾಗಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ ಎಂದರು.

ಪ್ರಹ್ಲಾದ ಕುಳಲಿ, ಗುಂಡೂರಾವ್ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಮಾಧ್ಯಮ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದನ್ನು ನೆನಪಿಸಿದರು.ಆಕಾಶವಾಣಿ,ದೂರದರ್ಶನ ಸೇರಿದಂತೆ ಹಲವು ಕಡೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇಂಥಹ ಹಿರಿಯರನ್ನು ಸನ್ಮಾನಿಸುತ್ತಿರುವ ಕೆಯುಡಬ್ಲ್ಯೂಜೆ ಪದಾಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆಗೆ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ ಸ್ವಾಗತಿಸಿದರು. ನಿಯೋಜಿತ ಖಜಾಂಚಿ ವಾಸುದೇವ ಹೊಳ್ಳ ವಂದಿಸಿದರು.


ಹಿರಿಯ ಪತ್ರಕರ್ತ ಕಂ.ಕ. ಮೂರ್ತಿ, ಕಾರ್ಯಕಾರಿ ಸಮಿತಿ ಸದಸ್ಯ ದೇವರಾಜ್ ನಗರ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಛಾಯಾಗ್ರಾಹಕ ಶರಣ ಬಸಪ್ಪ ಉಪಸ್ಥಿತರಿದ್ದರು.

Share This Article
Leave a comment