Trending

ಪಂಜಾಬ್‌ಗೆ ಗೆಲುವಿನ ಕಿರೀಟ; ಧವನ್ ಶ್ರಮ ವ್ಯರ್ಥ

ಐಪಿಎಲ್ 20-20ಯ 37ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ, ಡೆಲ್ಲಿ‌ ಕ್ಯಾಪಿಟಲ್ಸ್ ತಂಡ‌ದ ವಿರುದ್ಧ 5 ವಿಕೆಟ್‌ಗಳ ಅಂತರದಿಂದ ಗೆದ್ದಿತು.

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡಿಸಿ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಡಿಸಿ ತಂಡದಿಂದ ಆರಂಭಿಕ ಆಟಗಾರರಾಗಿ ಪೃಥ್ವಿ ಶಾ ಹಾಗೂ ಶಿಖರ್ ಧವನ್ ಮೈದಾನಕ್ಕಿಳಿದರು. ಶಾ ಅವರ ಆಟದ ಆರಂಭ ಅತ್ಯಂತ ಸಾಧಾರಣವಾಗಿದ್ದರೂ, ಧವನ ಅವರ ಆರಂಭ ಅದ್ಭುತವಾಗೊತ್ತು. ಶಿಖರ್ ಧವನ್ 61 ಎಸೆತಗಳಿಗೆ 106 ರನ್ ಗಳಿಸಿದರೆ, ಶಾ 11 ಎಸೆತಗಳಿಗೆ 7 ರನ್ ಮಾತ್ರ ಗಳಿಸಿ ಪೆವಿಲಿಯನ್ ಸೇರಿದರು. ನಂತರ ಮೈದಾನಕ್ಕಿಳಿದ ಯಾರ ಆಟವೂ ಅಷ್ಟೊಂದು ಆಕರ್ಷಕವಾಗಿರಲಿಲ್ಲ. ಡಿಸಿ ತಂಡ‌ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್‌ಗಳ ಸಾಧಾರಣ ಗಳಿಕೆ ಮಾಡಿತು.

ಪಂಜಾಬ್ ತಂಡ ಉತ್ಸಾಹದಿಂದಲೇ ಡಿಸಿ ಸವಾಲನ್ನು ಸ್ವೀಕಾರ ಮಾಡಿತು. ತಂಡದಿಂದ ಕೆ.ಎಲ್. ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಮೈದಾನಕ್ಕಿಳಿದರು. ರಾಹುಲ್ 11 ಬಾಲ್‌ಗಳಿಗೆ 15 ರನ್ ಹಾಗೂ 9 ಬಾಲ್‌ಗಳಿಗೆ 5 ರನ್ ಗಳಿಕೆ ಮಾಡಿದರು. ಆಟವನ್ನು‌ ಇಂದು ನಿಜವಾಗಿ ಗೆಲ್ಲಿಸಿದ್ದು ಎನ್. ಪೂರನ್ ಮತ್ತು ಜಿ. ಮ್ಯಾಕ್ಸ್‌ವೆಲ್ ಅವರ ಆಟ. ಪೂರನ್ 28 ಬಾಲ್‌ಗಳಿಗೆ 53 ರನ್‌ ಹಾಗೂ ಮ್ಯಾಕ್ಸ್‌ವೆಲ್ 24 ಎಸೆತಗಳಿಗೆ 32 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪಾಲು ಹಂಚಿಕೊಂಡರು. ಪಂಜಾಬ್ ತಂಡ 19 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿ ಪಂದ್ಯವನ್ನು ತನ್ನದಾಗಿಸಿಕೊಂಡಿತು.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024