Karnataka

ಸಿಎಂ ತವರಲ್ಲಿ ಶ್ರೀರಾಮನ ಹೆಸರಿನ ಲಕ್ಷ ದೀಪೋತ್ಸವಕ್ಕೆ ಅನುಮತಿ ರದ್ದು

ಮೈಸೂರು: ಸಿಎಂ ತವರಲ್ಲಿ ಶ್ರೀರಾಮನ ಹೆಸರಿನ ಲಕ್ಷ ದೀಪೋತ್ಸವಕ್ಕೆ ಅನುಮತಿ ಕೊನೇ ಕ್ಷಣದಲ್ಲಿ ರದ್ದು ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಅನುಮತಿ ರದ್ದು ಮಾಡಿರುವುದಕ್ಕೆ ಸಂಬಂಧಪಟ್ಟಂತೆ ಮೈಸೂರು ಉಪಪೊಲೀಸ್‌ ಆಯುಕ್ತ ಮುತ್ತುರಾಜು ಅವರು ಎಸ್‌.ಕೆ ದಿನೇಶ್‌ ಎನ್ನುವವರಿಗೆ ಪತ್ರ ಬರೆದಿದ್ದಾರೆ.

22-01-2024 ರಂದು ಸಂಜೆ 06.00 ಗಂಟೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಪ್ರಯುಕ್ತ ನೀವು ಕನ್ಯಕಾಪರಮೇಶ್ವರಿ ದೇವಸ್ಥಾನದ ಮುಂಭಾಗ ಪೂಜಾ ಕಾರ್ಯಕ್ರಮ ಹಾಗೂ ಭಜನ ಹಾಗೂ ಮುಖ್ಯ ಅಂಚೆ ಕಛೇರಿಯಿಂದ ದೊಡ್ಡಗಡಿಯಾರದವರೆಗೂ ಶ್ರೀರಾಮ ಜ್ಯೋತಿ (ದೀಪವನ್ನು) ಹಚ್ಚಲು ಈ ಕಛೇರಿಯಿಂದ ಈಗಾಗಲೇ ನಿಮಗೆ ಅನುಮತಿ ನೀಡಿರುವುದು ಸರಿಯಷ್ಟೆ.

ಈ ಕಾರ್ಯಕ್ರಮ ನಡೆಸುವ ಸ್ಥಳವು ಹೆಚ್ಚು ಜನಸಂದಣಿ ಸ್ಥಳವಾಗಿದೆ ಹಾಗೂ ಹೆಚ್ಚು ವಾಹನ ಸಂಚಾರ ಇರುತ್ತದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂಬ ಗುಪ್ತಚಾರ ಇಲಾಖೆ ಮಾಹಿತಿಯ ಹಿನ್ನಲೆಯಲ್ಲಿ ಪೊಲೀಸ್‌ ಇಲಾಖಾ ಅನುಮತಿಯಲ್ಲಿ ವಿಧಿಸಿರುವ ಷರತ್ತಿನ ಕ್ರಮ ಸಂಖ್ಯೆ 04 ರೀತ್ಯಾ ಅನುಮತಿಯನ್ನು ರದ್ದುಪಡಿಸಲಾಗಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನಿಮ್ಮ ದೇವಸ್ಥಾನದ ಪ್ರಾಂಗಣದಲ್ಲಿ ದೀಪ ಹಚ್ಚಿ ಪೂಜಾ ಕಾರ್ಯಕ್ರಮಗಳನ್ನು ನಡೆಸಬಹುದಾಗಿದೆ ಅಂತ ತಿಳಿಸಿದ್ದಾರೆ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024