ನಿವೃತ್ತ ಭಾರತೀಯ ಕಂದಾಯ ಅಧಿಕಾರಿ, ಮಂಡ್ಯದ ಸೊಸೆ ಡಾ. ಲಕ್ಷ್ಮೀ ಅಶ್ವಿನ್ ಗೌಡ ಜೆಡಿಎಸ್ ಗೆ ಗುಡ್ ಬೈ ಹೇಳಿ, ಇಂದು ( ಜ. 16) ಬಿಜೆಪಿಗೆ ಸೇರಲಿದ್ದಾರೆ. ಈ ಮೂಲಕ ರಾಜಕೀಯದ ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.
ಕಳೆದ ಚುನಾವಣೆಯ ವೇಳೆಯಲ್ಲಿ ನಾಗಮಂಗಲದಲ್ಲಿ ಜೆಡಿಎಸ್ ಸೇರಿದ್ದರು. ಆ ವೇಳೆ ಜೆಡಿಎಸ್ ನಿಂದ ಟಿಕೆಟ್ ವಂಚಿತರಾದರು. ನಂತರ ದಳಪತಿಗಳು ಡಾ ಲಕ್ಷ್ಮೀ ಅವರನ್ನು ಎಂಎಲ್ ಸಿ ಮಾಡುವ ಭರವಸೆ ನೀಡಿ ಸಮಾಧಾನ ಮಾಡಿದರು. ಈ ಭರವಸೆ ಕೂಡಾ ಹುಸಿಯಾದ ಮೇಲೆ ಲಕ್ಷ್ಮೀ ಜೆಡಿಎಸ್ ನಿಂದ ದೂರವಾದರು.
ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಹೆಚ್ಚು ಸಕ್ರಿಯವಾಗಿ ಇರಲು ಬಯಸಿರುವ ಹಿನ್ನೆಲೆಯಲ್ಲಿ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು