ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಈ ಭೇಟಿಯಲ್ಲಿ ಕುತೂಹಲ ಏನಿಲ್ಲ. ಬೆಂಗಳೂರಿಗೆ ಬಂದಾಗ ಭೇಟಿಯಾಗ್ತೇನೆ. ಅವರು ಹಿರಿಯರು, ನಮ್ಮ ಸಮಾಜದ ಮುಖಂಡರು. ಇವತ್ತು ಗುರುಪೂರ್ಣಿಮೆ . ಹಿರಿಯರ ಆಶೀರ್ವಾದ ಪಡೆಯೋಣ ಎಂದು ಬಂದೆ ಎಂದರು.
ಇದೊಂದು ಸೌಹಾರ್ಧಯುತ ಭೇಟಿ. ಅವರ ಮಾರ್ಗದರ್ಶನ ಪಡೆದಿದ್ದೇನೆ. ಅವರ ಜೊತೆ ರಾಜಕಾರಣದ ಚರ್ಚೆ ಮಾಡಿಲ್ಲ. ಅವರಿಗೆ ಗೌರವ ಕೊಡ್ತಾನೇ ಬಂದಿದ್ದೇನೆ ಎಂದು ತಿಳಿಸಿದರು.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕು ಎಂಬ ಆಸಕ್ತಿ ಬಿಎಸ್ ವೈ ಗೆ ಇತ್ತು. ಕಾರಣಾಂತರಗಳಿಂದ ಕೊಡಲು ಆಗಲಿಲ್ಲ. ಎಲ್ಲಾ ಅಡೆತಡೆ ನಿವಾರಣೆ ಮಾಡಿ, ಬೇರೆ ಸಮುದಾಯಕ್ಕೆ ತೊಂದರೆಯಾಗದಂತೆ 2-ಎ ಮೀಸಲಾತಿಯನ್ನು ನೀಡಬೇಕಿದೆ. ಬೊಮ್ಮಾಯಿ ಸಾಹೇಬ್ರು ಮೇಲೆ ಭರವಸೆ ಇದೆ. ಕೊಡ್ತಾರೆಂಬ ಭರವಸೆ ಇದೆ ಎಂದು ಕಾಂಗ್ರೆಸ್ ಶಾಸಕಿ ಹೇಳಿದ್ದಾರೆ.
ಶ್ರೀರಂಗಪಟ್ಟಣದ ಸಂಗಮದ ಬಳಿ ದುರಂತ : ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ
ಡಿಕೆಶಿ ಉತ್ಸವಕ್ಕೆ ಬೆಂಬಲಿಗರ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಉತ್ಸವ ಮಾಡ್ತಾರೆ. ಆ ಕಮಿಟಿಯಲ್ಲಿ ನಾನು ಇದ್ದೇನೆ. ಇವತ್ತು ಸಭೆ ಇದೆ ಭಾಗವಹಿಸ್ತೇನೆ. ಅವರಿಗೆ 75 ವರ್ಷ ತುಂಬಿದೆ. ಮನುಷ್ಯನ ಜೀವನದಲ್ಲಿ ಅದೊಂದು ಸಾರ್ಥಕತೆ. ಅವರು ಉತ್ಸವ ಮಾಡಿ ಎಂದು ಹೇಳಿಲ್ಲ. ನಾವೆಲ್ಲ ಸೇರಿ ಮಾಡ್ತಿದ್ದೇವೆ ಎಂದು ಹೆಬ್ಬಾಳ್ಕರ್ ತಿಳಿಸಿದರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment