Main News

ಲವ್ ಜಿಹಾದ್ ವಿರುದ್ಧ ಕಾನೂನು ಸಿಎಂ ಯೋಗಿ ಆದಿತ್ಯನಾಥ್ ಪ್ರಕಟ

ಅಂತರ್​ ಧರ್ಮಿಯ ಮದುವೆಗಾಗಿ ಬಲವಂತವಾಗಿ ಮತಾಂತರ ನಡೆಸಿದರೆ ಅವರನ್ನು ‘ರಾಮ ನಾಮ ಸತ್ಯ ಪ್ರಯಾಣ’ಕ್ಕೆ ಕಳುಹಿಸಿಕೊಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಿಂಗ್​ ಎಚ್ಚರಿಕೆ ನೀಡಿದ್ದಾರೆ.

ಅಷ್ಟೇ ಅಲ್ಲದೇ , ರಾಜ್ಯದಲ್ಲಿ ‘ಲವ್​ ಜಿಹಾದ್’​ ತಡೆಯಲು ಸರ್ಕಾರ ಕಾರ್ಯ ನಿರ್ವಹಿಸಲಿದೆ. ಇದಕ್ಕಾಗಿ ಕಾನೂನು ತರುವುದಾಗಿ ತಿಳಿಸಿದ್ದಾರೆ.

ವಿವಾಹದ ಸಂದರ್ಭದಲ್ಲಿ ಮತಾಂತರ ಅಗತ್ಯವಿಲ್ಲ ಎಂದು ಅಲಹಾಬಾದ್​ ಹೈ ಕೋರ್ಟ್​ ತಿಳಿಸಿದೆ. ಈ ಹೇಳಿಕೆ ಬೆನ್ನಲ್ಲೇ ಇಂದು ಮಾತನಾಡಿರುವ ಸಿಎಂ ಆದಿತ್ಯನಾಥ, ಲವ್​ ಜಿಹಾದ್​ ತಡೆಯಲು ಸರ್ಕಾರ ಕೆಲಸ ಮಾಡುತ್ತದೆ. ಗುರುತು ಮರೆ ಮಾಚಿ ನಮ್ಮ ಸಹೋದರರಿಯರ ಗೌರವದ ವಿರುದ್ಧ ಆಟವಾಡುವವರು, ಇನ್ನಾದರೂ ತಮ್ಮ ದಾರಿ ಸರಿಪಡಿಸಿಕೊಳ್ಳದಿದ್ದರೆ, ಅವರಿಗೆ ರಾಮ್​ ನಾಮ್​​ ಸತ್ಯ ಪ್ರಯಾಣ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮ ಹೇಳಿಕೆ ಬಗ್ಗೆ ಕೊನೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, ‘ಲವ್​ ಜಿಹಾದ್’​ ಮಾಫಿಯಾದಲ್ಲಿ ತೊಡಗಿರುವ ಅಪರಾಧಿಗಳಿಗೆ ಈ ಎಚ್ಚರಿಕೆ ಎಂದಿದ್ದಾರೆ.

ಮದುವೆ ಕಾರಣದಿಂದಾಗಿ ಧರ್ಮ ಬದಲಾಯಿಸಿಕೊಳ್ಳುವುದು ಮಾನ್ಯವಲ್ಲ ಎಂದು ಅಲಹಾಬಾದ್​ ಕೋರ್ಟ್​ ತಿಳಿಸಿದೆ. ನವ ದಂಪತಿಗಳ ಪ್ರಕರಣವೊಂದರಲ್ಲಿ ಈ ಹೇಳಿಕೆ ನೀಡಿದ್ದು, ಅವರ ಅರ್ಜಿ ವಜಾಗೊಳಿಸಲಾಗಿದೆ.

ಅಂತರ್​ ಧರ್ಮಿಯ ಮದುವೆಯಿಂದ ತೊಡಗು ಉಂಟಾಗಬಹುದು ಎಂದು ಪೊಲೀಸರಿಗೆ ನಿರ್ದೇಶಿಸಲು ಯುವತಿಯ ತಂದೆ ನ್ಯಾಯಾಲಯ ಮೊರೆ ಹೋಗಿದ್ದರು.

ಬಲಪಂಥೀಯ ಗುಂಪುಗಳ ಪ್ರಕಾರ ‘ಲವ್​ ಜಿಹಾದ್’​ ಎಂಬುದು ಪಿತೂರಿಯಾಗಿದೆ. ಮುಸ್ಲಿಂ ಸಮುದಾಯಕ್ಕೆ ಮಹಿಳೆಯರನ್ನು ಮತಾಂತರಗೊಳಿಸುವ ಉದ್ದೇಶದಿಂದ ತಮ್ಮ ನಿಜ ವ್ಯಕ್ತಿತ್ವ ಮರೆಮಾಚಿ ಅವರನ್ನು ಕೆಲವು ಯುವಕರು ಮದುವೆಯಾಗುತ್ತಾರೆ ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024