ವಿಧಾನಸಭೆ ಕಲಾಪದಲ್ಲಿ ಆಂಗಿ (ಶಟ್೯) ಬಿಚ್ಚಿದ ಕಾರಣಕ್ಕಾಗಿ ಕಾಂಗ್ರೆಸ್ನ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಒಂದು ವಾರ ಕಾಲ ಸದನದಿಂದ ಅಮಾನತು ಮಾಡಲಾಗಿದೆ.
ಇಂದಿನ ವಿಧಾನ ಸಭಾ ಕಲಾಪದ ವೇಳೆ ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭದ್ರಾವತಿ ಶಾಸಕ ಸಂಗಮೇಶ್ ಶರ್ಟ್ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ವೇಳೆ ಸಂಗಮೇಶ್ ನಡೆಗೆ ಸ್ಪೀಕರ್ ಕಾಗೇರಿ ತೀವ್ರ ಅಸಮಾಧಾನಗೊಂಡು ಸದನದಲ್ಲಿ ಗೌರವದಿಂದ ನಡೆದುಕೊಳ್ಳಿ ಎಂದು ಹೇಳಿದ್ದರು.
ಕ್ಷೇತ್ರದ ಜನತೆಗೆ ಅಗೌರವ ತರಬೇಡಿ. ಅಶಿಸ್ತಿನಿಂದ ನಡೆದುಕೊಂಡರೆ ಹೊರಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು.
ಬಳಿಕ ಸಂಗಮೇಶ್ಗೆ ಡಿ.ಕೆ. ಶಿವಕುಮಾರ್ ಶರ್ಟ್ ಹಾಕಿಸಿದ್ದರು.
ಅಂಗಿ ಬಿಚ್ಚಿದ್ದು ಅತಿರೇಕವೇನಲ್ಲ- ಶಾಸಕ :
ಭದ್ರಾವತಿ ಜನ ನನ್ನನ್ನು ಮೂರು ಬಾರಿ ಆಯ್ಕೆ ಮಾಡಿದ್ದಾರೆ. ಆರ್ಎಸ್ಎಸ್, ಬಿಜೆಪಿ, ಬಜರಂಗದಳದವರು ಭದ್ರಾವತಿಯಲ್ಲಿ ಕೋಮುಗಲಭೆ ಮಾಡಬೇಕು ಅನ್ಕೊಂಡಿದ್ದಾರೆ. ಕರಾವಳಿಯ ರೀತಿಯಲ್ಲೇ ಹಿಂದುತ್ವದಿಂದ ಗೆಲ್ಲಬಹುದು ಎಂದು ನನ್ನ ಮೇಲೆ, ಕುಟುಂಬದ ಮೇಲೆ ಅಟ್ರಾಸಿಟಿ ಕೇಸ್ ಹಾಕಿದ್ದಾರೆ. ನಾನು ಕಾಂಗ್ರೆಸ್ ಶಾಸಕನಾಗಿರುವ ಕಾರಣ ಬಿಜೆಪಿ ನಾಯಕರು ಕುತಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಘವೇಂದ್ರ ಶಿವಮೊಗ್ಗ ಜಿಲ್ಲೆಗೆ ಮುಖ್ಯಮಂತ್ರಿ ಆಗಿದ್ದಾರೆ. ಮುಂದಿನ ವಾರ ಭದ್ರಾವತಿಗೆ ಬಂದು ಅವರ ಹಲ್ಕಾಗಿರಿ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನನಗೆ ನ್ಯಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ಸದನದಲ್ಲಿ ಶರ್ಟ್ ಬಿಚ್ಚುವ ಹಂತಕ್ಕೆ ಹೋದೆ ಎಂದಿದ್ದಾರೆ.
ಸ್ಪೀಕರ್ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಅವರಿಗೆ ಪತ್ರ ಕೊಟ್ಟರೂ ಸರ್ಕಾರಕ್ಕೆ ಸೂಚನೆ ಕೊಟ್ಟಿಲ್ಲ. ಹೀಗಾಗಿ ಮನಸ್ಸಿಗೆ ನೋವಾಗಿ ಪ್ರತಿಭಟನೆ ಮಾಡಿದೆ ಎಂದರು.
ಶರ್ಟ್ ಬಿಚ್ಚಿದರೆ ಕ್ಷೇತ್ರದ ಜನರಿಗೆ ಏಕೆ ಅವಮಾನ ಆಗುತ್ತೆ? ನ್ಯಾಯ ಸಿಗದೇ ಇದ್ದಾಗ ನಾನು ಏನು ಮಾಡಬೇಕು? ನನ್ನ ಭಾವನೆ ಪ್ರಕಾರ ಅದು ಅತಿರೇಕ ಆಗಿಲ್ಲ ಎಂದು ಹೇಳಿದ್ದಾರೆ.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment