ಶಾಸಕ ಜಿ ಟಿ ದೇವೇಗೌಡ – ಪುತ್ರ ಹರೀಶ್ ಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ನಿರ್ಧಾರ ?

Team Newsnap
1 Min Read

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಹಾಗೂ ಅವರ ಪುತ್ರ ಹರೀಶ್ ಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಇದೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರುಗಳು ನಡೆಸಿದ ಮಾತುಕತೆ ನಂತರ ಡಿಟಿಜೆ ಕಾಂಗ್ರೆಸ್ ಸೇರಲು ನಿರ್ದರಿಸಿದ್ದಾರೆ ಎನ್ನಲಾಗಿದೆ.

ಮುಂದಿನ 2023ರ ವಿಧಾನ ಸಭಾ ಚುನಾವಣೆಗೆ ಶಾಸಕ ಜಿ. ಟಿ. ದೇವೇಗೌಡ ಹಾಗೂ ಪುತ್ರ ಹರೀಶ್ ಗೌಡರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಆಶ್ವಾಸನೆ ನೀಡಿದ್ದಾರೆ.

ಇದನ್ನು ಓದಿ – ದೆಹಲಿ ಪೊಲೀಸರಿಂದ ಸಂಸದ ಡಿ. ಕೆ. ಸುರೇಶ್ ಮೇಲೆ ಹಲ್ಲೆ – ಬಂಧನ

ಈ ನಿರ್ಧಾರದ ಬೆನ್ನೆಲ್ಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರಲು ಅಪ್ಪ – ಮಗ ಮುಂದಾಗಿದ್ದಾರೆ. ಚುನಾವಣೆ ಸಮೀಪವಾಗುತ್ತಿದ್ದಂತೆ ಜೆಡಿಎಸ್ ಶಾಸಕರು ಪಕ್ಷ ತೊರೆಯುವ ನಿರ್ಧಾರಕ್ಕೆ ಬರುತ್ತಿರುವುದು ದಳಕ್ಕೆ ಭಾರಿ ಪೆಟ್ಟು ಬಿದ್ದಂತೆ.

Share This Article
Leave a comment