ಮಂಗಳೂರಿನ ವಕೀಲ ರಾಜೇಶ್ ಭಟ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಮತ್ತು ರಾತ್ರಿ ಅಶ್ಲೀಲ ಮೇಸೆಜ್ಗಳನ್ನು ಕಳುಹಿಸುತ್ತಿದ್ದರು. ಈ ಸಂಗತಿಯನ್ನು ಸಂತ್ರಸ್ತೆ ವಿದ್ಯಾರ್ಥಿನಿ ಮಾಧ್ಯಮಗಳ ಮುಂದೆ ಹೇಳಿದ್ದಾಳೆ.
ಇಂಟರ್ನ್ ಶಿಪ್ ಮಾಡುತ್ತಿದ್ದ ನನ್ನನ್ನು ರಾತ್ರಿ ಎಂಟು ಗಂಟೆಯವರೆಗೂ ಆಫೀಸ್ನಲ್ಲಿ ಕೆಲಸ ಮಾಡೋಕೆ ಹೇಳಿದ್ದರು. ರಾತ್ರಿ ಅಶ್ಲೀಲ ಮೆಸೇಜ್ಗಳನ್ನು ಆತ ನನಗೆ ಕಳುಹಿಸಿದ್ದ, ನಾನು ಆ ಮೆಸೇಜ್ಗಳಿಗೆ ರಿಪ್ಲೈ ಮಾಡಿರಲಿಲ್ಲ,
ಒಂದು ದಿನ ರಾತ್ರಿ ಎಂಟು ಗಂಟೆಯ ತನಕ ಕೆಲಸ ಮಾಡಿಸಿದ್ದು ಅಂದು ಕಛೇರಿಯಲ್ಲಿ ಯಾರೂ ಇರಲಿಲ್ಲ, ಈ ವೇಳೆ ಛೇಂಬರ್ ಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದ, ಆ ಬಳಿಕ ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ತನ್ನ ಅಳಲನ್ನು ಹೇಳಿಕೊಂಡಿದ್ದಾರೆ.
. ಈ ವಿಚಾರವನ್ನು ಬಹಿರಂಗಗೊಳಿಸದಂತೆ ರಾಜೇಶ್ ಬೆದರಿಕೆಯನ್ನು ಹಾಕಿದ್ದ ಎಂದು ಸಂತ್ರಸ್ತೆ ವಿದ್ಯಾರ್ಥಿನಿ ಆರೋಪಿಸಿದ್ದರು.
ಘಟನೆಯ ಬಳಿಕ ವಿದ್ಯಾರ್ಥಿನಿಗೆ ದೂರವಾಣಿ ಕರೆ ಮಾಡಿ ರಾಜೇಶ್ ನನ್ನಿಂದ ತಪ್ಪಾಗಿದೆ ಎಂದು ಗೋಗರೆದಿದ್ದ ಆಡಿಯೋ ಸಹ ವೈರಲ್ ಆಗಿತ್ತು. ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ರಾಜೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ