Trending

ಮಾದಕವಸ್ತು ಪ್ರಕರಣದ ಮಾಹಿತಿ ಸೋರಿಕೆ – ಎಸಿಪಿ‌ ಅಮಾನತು

ಚಂದನವನದಲ್ಲಿ ನಡೆಯುತ್ತಿರುವ ಮಾದಕವಸ್ತು ಮಾಫಿಯಾವನ್ನು ಸಿಸಿಬಿ ಪೋಲೀಸರು ಬಹುಜಾಣ್ಮೆಯಿಂದ ಭೇದಿಸುತ್ತಿದ್ದಾರೆ. ಯಾರೊಬ್ಬರಿಗೂ ಅವರ ನಡೆಯ ಕುರುಹು ಕೂಡ ತಿಳಿಯದಂತೆ ವ್ಯೂಹ ರೂಪಿಸುತ್ತಿದ್ದಾರೆ‌. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ, ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯ ಸಹಾಯಕ ಪೋಲೀಸ್ ಆಯುಕ್ತ ಮುದವಿ ಎನ್ನುವ ಅಧಿಕಾರಿ ಆರೋಪಿಗಳ ಕಡೆಯವರಿಗೆ ಮಾಹಿತಿ‌ ಸೋರಿಕೆಯಾಗುವಲ್ಲಿ‌ ಸಹಕರಿಸಿರುವ ವಿಚಾರ ಇದೀಗ ಬಯಲಾಗಿದೆ.

ವಾಸ್ತವದಲ್ಲಿ ಮುದವಿಯವರು ಮಾದಕವಸ್ತು ಪ್ರಕರಣದ ತನಿಖೆ ನಡೆಸುತ್ತಿದ್ದ ತಂಡದ ಭಾಗವೇ ಆಗಿರಲಿಲ್ಲ ಎಂದು ಜಂಟಿ ಪೋಲೀಸ್ ಆಯುಕ್ತ ಸಂದೀಪ್ ಪಾಟೀಲರು ಹೇಳಿದ್ದಾರೆ. ‘ವಿಚಾರಣೆಯ ಸಂದರ್ಭದಲ್ಲಿ ಅವರು ಆರೋಪಿಗಳ ಸಹಚರರೊಂದಿಗೆ ಸಂಪರ್ಕ ಹೊಂದಿದ್ದರು ಹಾಗೂ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದರು’ ಎಂದು ಅವರು ಹೇಳಿದ್ದಾರೆ.

ಮುದವಿ ಹಾಗೂ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ ಆರೋಪಿಗಳಿಗೆ ಸಹಾಯ ಮಾಡಿದ್ದಾರೆ‌. ಆರೋಪಿ ವಿನೋದ್ ಖನ್ನಾ ತನ್ನ ಸಹಚರರೊಡನೆ ಮಾತನಾಡಲು ತಮ್ಮ ಮೊಬೈಲ್ ನ್ನು ಹಸ್ತಾಂತರಿಸಿದ್ದಾರೆ. ಈಗ ಮುದವಿಯವರ ಮೊಬೈಲ್ ನ್ನು ಅಧಿಕಾರಿಗಳು ವಶ ಮಾಡಿಕೊಂಡಿದ್ದಾರೆ ಕಾಲ್ ರೆಕಾರ್ಡ್ ಗಳನ್ನು ಪರಿಶೀಲಿಸಲಾಗುತ್ತಿದೆ.

ಮಾದಕವಸ್ತು ತನಿಖೆಯ ಪ್ರಗತಿಯ ಬಗೆಗಿನ ಮಾಹಿತಿ‌ ಸೋರಿಕೆ ಆಗಿರುವುದು ತಿಳಿದ ತಕ್ಷಣ ಸಿಸಿಬಿ ಆಂತರಿಕ ತನಿಖೆ ನಡೆಸಿದೆ. ಎಸಿಪಿ ಮುದವಿಯವರ ಕೈವಾಡವಿರುವುದು ತಿಳಿದು ಬಂದಿದೆ. ಮುದವಿಯವರು ದಾಳಿಯ ಸುಳಿವುಗಳು, ತಂತ್ರಗಳು, ದಾಳಿ‌ಗೊಳಗಾಗಬಹುದಾದ ವ್ಯಕ್ತಿಗಳ ಹೆಸರುಗಳು, ತನಿಖೆಯ ಮಾಹಿತಿಗಳು ಮುಂತಾದವುಗಳನ್ನು ಆರೋಪಿ ವೀರೇನ್ ಖನ್ನಾ ಸಹಚರರಿಗೆ ರವಾನೆ ಮಾಡುತ್ತಿದ್ದರು ಎಂದು ಆಂತರಿಕ ತನಿಖೆ ಬಯಲು ಮಾಡಿದೆ.
ಈ ಹಿನ್ನೆಲೆಯಲ್ಲಿ ಎಸಿಪಿ ಮುದವಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಂಟಿ ಆಯುಕ್ತರು ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024