ಕಾಶ್ಮೀರಿ ಪಂಡಿತರು ಕಣಿವೆಯನ್ನ ತೊರೆಯಬೇಕು ಅಥವಾ ಸಾವಿಗೆ ಸಿದ್ಧರಾಗಬೇಕು ಎಂದು ಭಯೋತ್ಪಾದಕರು ಬಿಡುಗಡೆ ಮಾಡಿದ ಪೋಸ್ಟರ್ʼನಲ್ಲಿ ತಿಳಿಸಲಾಗಿದೆ. ಕಾಶ್ಮೀರಿ ಪಂಡಿತರು ಭಯೋತ್ಪಾದಕರ ನಿರಂತರ ಗುರಿಯಾಗಿದ್ದಾರೆ ಎಂಬುದು ನಿಜ. ಪುಲ್ವಾಮಾದ ಹವಾಲ್ ಟ್ರಾನ್ಸಿಟ್ ನಿವಾಸದಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತನಿಗೆ ಲಷ್ಕರ್-ಎ-ಇಸ್ಲಾಂ ಎಂಬ ಭಯೋತ್ಪಾದಕ ಸಂಘಟನೆ ಬೆದರಿಕೆ ಹಾಕಿದೆ.
ಇದನ್ನು ಓದಿ – ಮಂಡ್ಯ ಜಿಲ್ಲೆಯ ಪ್ರವೇಶಕ್ಕೆ ಋಷಿಕುಮಾರ್ , ಮುತಾಲಿಕ್ ಗೆ ಶಾಶ್ವತ ನಿರ್ಬಂಧಕ್ಕೆ ಒತ್ತಾಯ -ಪ್ರಗತಿಪರರ ಪ್ರತಿಭಟನೆ
ಟ್ರಾನ್ಸಿಟ್ ವಸತಿಗೃಹದಲ್ಲಿ ವಾಸಿಸುವ ಹೆಚ್ಚಿನ ಕಾಶ್ಮೀರಿ ಪಂಡಿತರು ಸರ್ಕಾರಿ ಕೆಲಸಗಳನ್ನು ಮಾಡುತ್ತಾರೆ. 5000 ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರು ಕೆಲವು ವರ್ಷಗಳ ಹಿಂದೆ ಪಿಎಂ ಪ್ಯಾಕೇಜ್ ಅಡಿಯಲ್ಲಿ ಸರ್ಕಾರಿ ಉದ್ಯೋಗಗಳನ್ನ ನೀಡಿದ್ರೂ ಕಾಶ್ಮೀರದಲ್ಲಿ ಉಳಿಯಲು ಸಿದ್ಧರಿಲ್ಲ. ಕಾಶ್ಮೀರಕ್ಕೆ ಹೋಗಿ ಕೆಲಸ ಮಾಡಬೇಕು ಎಂಬ ಷರತ್ತಿನ ಮೇಲೆ ಈ ಉದ್ಯೋಗಗಳನ್ನ ನೀಡಲಾಯಿತು ಮತ್ತು ಅವ್ರು ಅಲ್ಲಿ ಸುರಕ್ಷಿತವೆಂದು ಪರಿಗಣಿಸಲಾದ ಪ್ರದೇಶಗಳಲ್ಲಿ ಉಳಿಯಲು ವ್ಯವಸ್ಥೆ ಮಾಡಲಾಯಿತು.
ಕಳೆದ ವರ್ಷ ಅಕ್ಟೋಬರ್ 7 ರಂದು, ಭಯೋತ್ಪಾದಕರು ಶಾಲೆಗೆ ನುಗ್ಗಿ ವಿದ್ಯಾರ್ಥಿಗಳ ಮುಂದೆ ಅಲ್ಪಸಂಖ್ಯಾತ ಸಮುದಾಯದ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನ ಗುಂಡಿಕ್ಕಿ ಕೊಂದಾಗ, ಮತ್ತೊಂದು ಭಯೋತ್ಪಾದಕ ಗುಂಪು ಬೆದರಿಕೆಯನ್ನು ಹಾಕಿತ್ತು.
ಎಲ್ಲಾ ವಲಸಿಗರು ಮತ್ತು ಆರ್ಎಸ್ಎಸ್ ಏಜೆಂಟರು ಕಾಶ್ಮೀರವನ್ನ ತೊರೆಯಬೇಕು ಅಥವಾ ಸಾವನ್ನು ಎದುರಿಸಲು ಸಿದ್ಧರಾಗಿರಬೇಕು ಎಂದು ಬೆದರಿಕೆಯಲ್ಲಿ ಬರೆಯಲಾಗಿದೆ. ಕಾಶ್ಮೀರವನ್ನು ಮತ್ತೊಂದು ಇಸ್ರೇಲ್ ನ್ನಾಗಿ ಮಾಡಲು ಮತ್ತು ಕಾಶ್ಮೀರಿ ಮುಸ್ಲಿಮರನ್ನ ಕೊಲ್ಲಲು ಬಯಸುವ ಕಾಶ್ಮೀರ ಪಂಡಿತರಿಗೆ ಇಲ್ಲಿ ಜಾಗವಿಲ್ಲ.ಎಂದು ಹವಾಲ್ ಟ್ರಾನ್ಸಿಟ್ ವಸತಿಯ ಅಧ್ಯಕ್ಷರನ್ನು ಉದ್ದೇಶಿಸಿ ಪೋಸ್ಟರ್ ಬರೆಯಲಾಗಿದೆ.
ಇದನ್ನು ಓದಿ – ಮೈಸೂರಿನಲ್ಲಿ ಭಾರಿ ಮಳೆ ಕೊಚ್ಚಿ ಹೋದ ಸೇತುವೆ – ಕುಸಿದ ರಸ್ತೆ
ಬುದ್ಗಾಮ್ನ ಕಂದಾಯ ಇಲಾಖೆಯ ಅಧಿಕಾರಿ ರಾಹುಲ್ ಭಟ್ ಅವರನ್ನ ಭಯೋತ್ಪಾದಕರು ಕೊಂದಿರುವುದರಿಂದ, ಪಿಎಂ ಪ್ಯಾಕೇಜ್ನ ಉದ್ಯೋಗಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡುವ ಬೆದರಿಕೆ ಹಾಕುತ್ತಿದ್ದಾರೆ. ಅನೇಕರು ಕಾಶ್ಮೀರವನ್ನ ತೊರೆದು ಜಮ್ಮುವಿನಲ್ಲಿರುವ ತಮ್ಮ ಮನೆಗಳಿಗೆ ಬಂದಿದ್ದಾರೆ ಎಂದು ಮಾಹಿತಿ ಹೇಳುತ್ತದೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮುವಿನಲ್ಲಿ ರಾಹುಲ್ ಭಟ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ, ಕುಟುಂಬಕ್ಕೆ ಆರ್ಥಿಕ ನೆರವು ಮತ್ತು ಅವರ ಮಗಳ ಶಿಕ್ಷಣದ ವೆಚ್ಚಗಳನ್ನು ಘೋಷಿಸಿದ್ದಾರೆ. ಆದರೆ ಈ ಘಟನೆಯಿಂದ ಕೋಪಗೊಂಡ ಕಾಶ್ಮೀರಿ ಪಂಡಿತರು ದೇಶದ ಅನೇಕ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ವಾಸ್ತವವಾಗಿ, ಕಾಶ್ಮೀರದಲ್ಲಿ ಒಂದು ಕಾಲದಲ್ಲಿ ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರನ್ನು ನೆಲೆಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೆ ಭಯೋತ್ಪಾದಕರು ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ ಬಗ್ಗೆ ಕಣಿವೆಯಲ್ಲಿ ಆತಂಕ ಮತ್ತು ಆಕ್ರೋಶ ಹೆಚ್ಚುತ್ತಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment