ಬೆಂಗಳೂರು ನಗರದ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ (ಗೇಟ್ ನಂ.1) ಫೆ. 27ರಂದು ಬೆಳಗ್ಗೆ 10.30ಕ್ಕೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದೆ.
ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ನಂತರ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು, ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡತಕ್ಕದ್ದು ಎಂದು ಸೂಚನೆ ನೀಡಲಾಗಿದೆ.ಶೀಘ್ರದಲ್ಲಿ ಕ್ಯಾನ್ಸರ್ ಲಸಿಕೆ ಲಭ್ಯವಾಗಲಿದೆ : ರಷ್ಯಾ ಅದ್ಯಕ್ಷ ಪುಟಿನ್ ಘೋಷಣೆ
ಫೆಬ್ರವರಿ 27ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು