Main News

ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯಗತ್ಯ: ನ್ಯಾ. ವೀರಪ್ಪ

ಕಾನೂನನ್ನು ಉತ್ತಮ ರೀತಿಯಾಗಿ ತಿಳಿದುಕೊಂಡರೆ ನಮಗೆ ಇರುವಂತಹ ಹಕ್ಕುಗಳು ಅರಿವಾಗುತ್ತದೆ.ಸಮಾಜದಲ್ಲಿ ಬದುಕಲು ಸಹಾಯವಾಗುತ್ತದೆ ಆಗಾಗಿ ಜನಸಾಮಾನ್ಯರಿಗೆ ಕಾನೂನು ಅರಿವು ಅತ್ಯಗತ್ಯ ಎಂದು ಹೈಕೋರ್ಟ್ ನ ನ್ಯಾಯಾಧೀಶ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾ ವೀರಪ್ಪ ತಿಳಿಸಿದರು.

ಇದನ್ನು ಓದಿ –ಕೆಸರು, ನೀರಿನಲ್ಲಿ ಸಾಮಾನ್ಯ ಮಹಿಳೆಯಂತೆ ನಡೆದುಕೊಂಡು ಹೋಗುವ ಐಎಎಸ್ ಅಧಿಕಾರಿ

ಮಂಡ್ಯ ನ್ಯಾಯಾಲಯದ ಆವರಣದಲ್ಲಿ ನಡೆದ ದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವಗಳ ಪ್ರಾಧಿಕಾರ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಭಾರತದ ಅಮೃತ ಮಹೋತ್ಸವ-2021 ಅಂಗವಾಗಿ “ಜಾಥಾ ಹಾಗೂ ಕಾನೂನು ಅರಿವು”ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ಅಂಗನವಾಡಿ ಕಾರ್ಯಕರ್ತರು ಹಕ್ಕುಗಳ ಬಗ್ಗೆ ಹಾಗೂ ಮನೆಯಲ್ಲಿರುವ ವೃದ್ಧರನ್ನು ಯಾವ ರೀತಿಯಾಗಿ ಕಾಳಜಿಯಿಂದ ನೋಡಿಕೊಳ್ಳಬೇಕು ಎಂಬುದರ ಕುರಿತು ಜನರಲ್ಲಿ ಅರಿವು ಮೂಡಿಸ ಬೇಕು ಎಂದರು.

ಕೋವಿಡ್ 19 ರ ಕಾಲಘಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತರ ಪಾತ್ರ ಬಹಳ ಮುಖ್ಯವಾದದ್ದು,ತಮ್ಮ ಪ್ರಾಣವನ್ನು ಲೆಕ್ಕಿಸದೆ ಸೇವೆ ಮಾಡಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಕಾನೂನನ್ನು ಕುರಿತು ಅರಿವು ಮೂಡಿಸಲು ಕೈಗೊಂಡಂತಹ ಜಾಥಾ ಯಶಸ್ವಿಯಾಗಲಿ ಎಂದರು

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜ್ಞೇಶ್, ಮಂಡ್ಯಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎ.ಎಂ ನಳಿನಿಕುಮಾರಿ ಸೇರಿದಂತೆ ಇತರರ ಉಪಸ್ಥಿತರಿದ್ದರು.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024