ಗೋಮಾಂಸ ಸೇವನೆ ಕುರಿತು ಮಾತನಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಗೋ ಹತ್ಯೆ ವಿಚಾರ ಮುಂದಿಟ್ಟುಕೊಂಡೆ ಚುನಾವಣೆಗೆ ಸ್ಪರ್ಧಿಸಲಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಟಾಂಗ್ ನೀಡಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಗೋ ಹತ್ಯೆ ವಿಚಾರ ಮುಂದಿಟ್ಟುಕೊಂಡೆ ಚುನಾವಣೆಗೆ ಸ್ಪರ್ಧಿಸಲಿ. ಜನ ಆಗ ಸರಿ ತಪ್ಪನ್ನು ಹುಡುಕಿ ಫಲಿತಾಂಶ ನೀಡುತ್ತಾರೆ. ಅವರ ಸರ್ಕಾರ ಬಂದರೆ ಈ ಕಾನೂನನ್ನು ವಾಪಸ್ಸು ತೆಗೆದುಹಾಕಬಹುದಲ್ಲವೆ ಎಂದು ಹೇಳಿದರು.
ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬರಲು ಹೆಚ್.ವಿಶ್ವನಾಥ್ ರೀತಿ ಸಿ.ಪಿ.ಯೋಗೇಶ್ವರ್ ಕೂಡ ಶ್ರಮವಹಿಸಿದ್ದಾರೆ. ಆದರೆ ವಿಶ್ವನಾಥ್ಗೆ ಅಸಮಾಧಾನ ಇರೋದು ನಿಜ. ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಹಾಗಾಗಿ ಯಾಕೆ ಅಂತ ಪ್ರಶ್ನಿಸಬಾರದು ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳಿದರು.
ಹೆಚ್.ವಿಶ್ವನಾಥ್ ಅಸಮಾಧಾನ ಸಂಬಂಧ ಅವರ ಜೊತೆ ಮಾತನಾಡುತ್ತೇನೆ. ಸದ್ಯ ಕೋಪದಲ್ಲಿದ್ದು, ಈಗ ಅವರಿಗೆ ಸಲಹೆ ಕೊಡಲು ಸಾಧ್ಯವಿಲ್ಲ. ಅವರು ಮಾತಾಡಿ ಮುಗಿಸಿದ ನಂತರ ನಾನು ಅವರ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯಾದಾಗ ಅಸಮಾಧಾನಗಳು ಉಂಟಾಗುವುದು ಸಹಜ. ಹಾಗಂತ ಎಲ್ಲರಿಗೂ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ವಿಶ್ವನಾಥ್ ಅವರು ಎಡವಿದ್ದಾರೆ. ಸಚಿವ ಸ್ಥಾನ ಕೈ ತಪ್ಪಲು ಅನೇಕ ಕಾರಣಗಳಿದೆ. ಅದನ್ನೆಲ್ಲ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ನಿಗಮ ಮಂಡಳಿ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ತಪ್ಪು ಮಾಡಿದ್ದಾರೆ. ಈ ಬಗ್ಗೆ ನನಗೆ ಬೇಸರವಿದೆ. ನಾನು ಸೂಚಿಸಿದ ಒಬ್ಬರಿಗೂ ನಿಗಮ ಮಂಡಳಿ ಸ್ಥಾನ ನೀಡಿಲ್ಲ. ಚುನಾವಣೆಯಲ್ಲಿ ಕೆಲಸ ಮಾಡಿದ ಮುಖಂಡರಿಗೆ ಕಾರ್ಯಕರ್ತರಿಗೆ ಇದು ಬೇಸರ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment