ಸಿಎಂ ಅಭ್ಯರ್ಥಿ ಘೋಷಿಸಲಿ – ಯಾರು ಉಳಿಯುತ್ತಾರೆ, ಹೋಗುತ್ತಾರೆ ನೋಡೋಣ: ರವಿ

Team Newsnap
1 Min Read

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸಿ. ನಂತರ ಯಾರು ಉಳಿಯುತ್ತಾರೆ, ಯಾರು ಹೋಗುತ್ತಾರೆ ಕಾದು ನೋಡೋಣ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು ಹಾಕಿದ್ದಾರೆ

ಸುದ್ದಿಗಾರರ ಜೊತೆ ಮಾತನಾಡಿದ ರವಿ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಇಬ್ಬರಲ್ಲಿ ಯಾರ ಹೆಸರನ್ನು ಘೋಷಿಸಿದರೂ ಒಬ್ಬರು ಹೊರಗೆ ಬರುತ್ತಾರೆ. ಇಬ್ಬರಲ್ಲಿ ಒಬ್ಬರನ್ನು ಮಾಡಿದರೆ ಸೇಡು ತೀರಿಸಿಕೊಳ್ಳಲು ಪರಮೇಶ್ವರ್ ಅವರೇ ಹೊರಗೆ ಬರುತ್ತಾರೆ ಎಂದರು.

ಕೇಡರ್ ಆಧಾರಿತ ಪಾರ್ಟಿ, ನಮ್ಮದು ಕಾಂಗ್ರೆಸಿನಷ್ಟು ದುರ್ಬಲ ಪಕ್ಷವಲ್ಲ. ಕಾಂಗ್ರೆಸ್ ಅವರಿಗೆ ಅವರ ಪಕ್ಷದ ಶಾಸಕರನ್ನೇ ಉಳಿಸಿಕೊಳ್ಳಲು ಆಗಲಿಲ್ಲ, ಸೆಳೆಯುವುದು ಎಲ್ಲಿಂದ ಬಂತು ? ಅವರ ಶಾಸಕರನ್ನೇ ಏಕೆ ಉಳಿಸಿಕೊಳ್ಳಲಾಗಲಿಲ್ಲ ಎನ್ನುವುದನ್ನು ಕಾಂಗ್ರೆಸ್ ರಿಸರ್ಚ್ ಮಾಡಬೇಕು. ನಮ್ಮವರು ಏಕೆ ಪಾರ್ಟಿ ಬಿಟ್ಟರು ಅಂತ ಸಂಶೋಧನ ತಂಡ ರಚನೆ ಮಾಡಿ ಅಧ್ಯಯನ ಮಾಡಲಿ. ಆಗ ಸೆಳೆಯಬಹುದೋ, ಹೋಗುತ್ತಾರೋ, ಬರುತ್ತಾರೋ ಗೊತ್ತಾಗುತ್ತದೆ ಎಂದರು.

Share This Article
Leave a comment