ಕೇಂದ್ರ ಸರ್ಕಾರದ ಕೃಷಿ ಬಿಲ್ ಕುರಿತ ಲಾಭ-ನಷ್ಟದ ಚರ್ಚೆಯಾಗಲಿ. ಹೋರಾಟಮಾಡುತ್ತಿರುವವರು ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಕೇಂದ್ರದ ಕೃಷಿ, ರೈತ, ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಸೆಪ್ಟೆಂಬರ್ 27 ರಂದು ರೈತ ಸಂಘಟನೆಗಳು ಕರೆದಿರುವ ಭಾರತ್ ಬಂದ್ ಕುರಿತು ಉಡುಪಿಯಲ್ಲಿ ವರದಿಗಾರರೊಂದಿಗೆ ಸಚಿವರು ಮಾತನಾಡಿದರು. ಬಿಲ್ನ ಸಾಧಕ-ಬಾಧಕ ಚರ್ಚಿಸದೆ ಅದು ಸರಿಯಿಲ್ಲ ಎಂದು ರೈತಪರ ಹೋರಾಟಗಾರರು ಹೇಗೆ ನಿರ್ಧರಿಸುತ್ತಾರೆ ಎಂದು ಪ್ರಶ್ನಿಸಿದರು.
ರೈತ ಹೋರಾಟಗಾರರ ಜತೆ 11 ಸುತ್ತಿನ ಚರ್ಚೆ ನಡೆದಿದೆ. ಮತ್ತೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದರು. ಕೇಂದ್ರದ ಕೃಷಿ ಬಿಲ್ ಅನುಷ್ಠಾನಗೊಳಿಸಿದ ರಾಜ್ಯಗಳ ರೈತರಿಗೆ ಲಾಭವಾಗಿದೆ. ಹೋರಾಟ ಮಾಡುವವರು ಈ ವರದಿಯನ್ನು ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೈತರ ವಿಷಯದಲ್ಲಿ ರಾಜಕೀಯ ಬೇಡ. ದೇಶಕ್ಕೆ ಅನ್ನಕೊಡುವ ರೈತರೊಂದಿಗೆ ಚರ್ಚಿಸಲು ಸದಾಸಿದ್ಧ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!