ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಿರ್ಭಯ ಕಾನೂನು ಬಳಸಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಕೊಡಗಿನ ಕೋಡ್ಲಿಪೇಟೆಯಲ್ಲಿ ವರದಿಗಾರರೊಂದಿಗೆ ಸ್ವಾಮೀಜಿ ಮಾತನಾಡಿ, ಮೈಸೂರಿನ ಚಾಮುಂಡಿದೇವಿಯ ತಪ್ಪಲಿನಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿರುವುದು ಅಪಮಾನ. ಇದರಿಂದ ಕರ್ನಾಟಕದ ನೈತಿಕತೆ ತಲೆತಗ್ಗಿಸುವಂತಾಗಿದೆ ಎಂದರು.
ನಿರ್ಭಯ ಕಾನೂನನ್ನು ರಾಜ್ಯದಲ್ಲಿ ಮತ್ತುಷ್ಟು ಬಿಗಿಗೊಳಿಸಬೇಕು. ರಾಜ್ಯದಲ್ಲಿ ಭಯದ ವಾತಾವರಣ ಇಲ್ಲದಂತಿತ್ತು. ಆದರೆ ಈಗ ವಿದ್ಯಾರ್ಥಿಗಳು, ಮಹಿಳೆಯರು ಭಯದಲ್ಲಿ ಓಡಾಡುಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ಕೊಡುವ ಕಾನೂನು ಜಾರಿ ಮಾಡಬೇಕೇ ಹೊರತು ಅವರ ಸ್ವಾತಂತ್ರ್ಯ ಮೊಟಕು ಮಾಡುವ ಕಾನೂನು ಬೇಡ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಕಿವಿಮಾತು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ