ಜನಾಕ್ರೋಶಕ್ಕೆ ಕೊನೆಗೂ ಮಣಿದಿರುವ ಕೇಂದ್ರ ಸರ್ಕಾರವೂ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ. ಹೀಗಾಗಿ ತೈಲ ಬೆಲೆಗಳು ದೇಶಾದ್ಯಂತ ಕಡಿಮೆಯಾಗುತ್ತಿವೆ. ಆದರೆ, ಕರ್ನಾಟಕದಲ್ಲಿ ಬಿಜೆಪಿಯದ್ದೇ ಸರ್ಕಾರ ಸುಂಕ ಕಡಿತಕ್ಕೆ ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HDK) ಟ್ವಿಟ್ ನಲ್ಲಿ ಹೇಳಿದ್ದಾರೆ.
ಪಕ್ಕದ ರಾಜ್ಯ ಕೇರಳದಲ್ಲಿ ಈಗಾಗಲೇ ಸುಂಕ ಕಡಿತ ಮಾಡಲಾಗಿದೆ. ಆದರೆ, ರಾಜ್ಯ ಬಿಜೆಪಿ ಸರಕಾರವು ಅಕ್ಕಿ ಮೇಲೆ ಆಸೆ, ನೆಂಟರ ಮೇಲೆ ಪ್ರೀತಿ ಎನ್ನುವ ವ್ಯಾಪಾರಿ ಬುದ್ಧಿಯ ಜಾಣ ನಡೆ ಅನುಸರಿಸುತ್ತಿದೆ. ತೆರಿಗೆ ಕಡಿತದ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಅವರು ಹೇಳಿರುವುದು ಒಪ್ಪುವ ಮಾತಲ್ಲ ಎಂದಿದ್ದಾರೆ.
ಇದನ್ನು ಓದಿ : ಫೇಸ್ ಬುಕ್ ನಲ್ಲಿ ಪರಿಚಯ- ಪ್ರೀತಿಯ ನಾಟಕ : ನಾಗಮಂಗಲದ ಯುವಕನಿಗೆ ಯಾಮಾರಿಸಿದ 50ರ ಆಂಟಿ !
ಅಧಿಕಾರದಲ್ಲಿ ಇರುವವರಿಗೆ ಅತಿ ಜಾಣತನ ಒಳ್ಳೆಯದಲ್ಲ. ಕೋವಿಡ್, ಸತತ ಬೆಲೆ ಏರಿಕೆಯಿಂದ ಹೈರಾಣ ಆಗಿರುವ ಜನರ ತಾಳ್ಮೆ ಪರೀಕ್ಷೆ ಮಾಡುವುದು ಒಳ್ಳೆಯದಲ್ಲ. ಕೂಡಲೇ ಸುಂಕ ಕಡಿತ ಮಾಡಿ ತೈಲ ಬೆಲೆ ಪ್ರಹಾರದಿಂದ ಬಸವಳಿದಿರುವ ಜನರಿಗೆ ನೆರವಾಗಬೇಕು ಎನ್ನುವುದು ಎಂದು ಟ್ವಿಟ್ ನಲ್ಲಿ ಆಗ್ರಹ ಮಾಡಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ಗೃಹ ಬಳಕೆಯ ಸಿಲಿಂಡರ್ 50 ರು ಏರಿಕೆ- ಇಂದಿನಿಂದಲೇ ಹೊಸ ದರ ಜಾರಿ