ಐದು ವರ್ಷದ ಅಧಿಕಾರ ಅವಧಿಯಲ್ಲಿ ನಾವು 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜಕಾರಣಿಗಳಿಗೆ ಕಿವಿ ಮಾತು ಹೇಳಿದರು.
ಹುಬ್ಬಳ್ಳಿಯಲ್ಲಿ ನೂತನ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ಕಾರ್ಯಕ್ರಮ ನೇರವೆರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ , ರಾಜಕಾರಣ ಮಾಡಲಿಕ್ಕೆ ಘೋಡಾ ಹೈ ಮೈದಾನ್ ಹೈ ಎಂದರು.
ಸಬ್ ಲೋಗ್ ಹಮಕೋ ಪೇಯಚಾನ್ ಹೈ ಇದರ್ ( ರಾಜಕರಾಣ ಮಾಡಲು ಕುದುರೇನು ಇದೆ, ಮೈದಾನವು ಇದೆ. ಇಲ್ಲಿ ನಮಗೆ ಎಲ್ಲರೂ ಗೊತ್ತಿದ್ದವರೇ) ಎಂದು ಹಿಂದಿಯಲ್ಲೇ ಕಾರ್ಯಕ್ರಮಕ್ಕೆ ಬಂದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಹುಬ್ಬಳ್ಳಿಯ ಕೆಲ ಬಡಾವಣೆಗಳ ಹೆಸರು ಹೇಳಿದರು.
ರಾಜಕಾರಣ ಮಾಡುವಾಗ ಗೆರೆ ಹಾಕಿ ರಾಜಕಾರಣ ಮಾಡೋಣ, ಆದರೆ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡೋಣ. ಡಿಜಿಯಿಂದ ಹಿಡಿದು ಕಾನ್ ಸ್ಟೇಬಲ್ ರವರೆಗೂ ಎಲ್ಲರೂ ಫೀಲ್ಡಿಗಿಳಿದು ಕೆಲಸ ಮಾಡಬೇಕು. ಕೇವಲ ಆಫೀಸ್ನಲ್ಲಿ ಕುಳಿತು ಆರ್ಡರ್ ಮಾಡಿದರೆ ಆಗಲ್ಲ. ಹುಬ್ಬಳ್ಳಿ ಧಾರವಾಡ ಕಾನೂನು ಸುವ್ಯವಸ್ಥೆ ಬಹಳ ಸುಧಾರಿಸಿದೆ. ಇದು ಬಹಳ ಶಾಂತಿಯುತ ನಗರ ಆದರೆ ಇತ್ತೀಚೆಗೆ ಇಲ್ಲಿ ಕೆಲ ಕಿಡಿಗೇಡಿಗಳು ಶಾಂತಿ ಕದಡುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
This website uses cookies.
Leave a Comment