Karnataka

ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿ: ಎಡಿಸಿ ನಾಗರಾಜು

ಜಿಲ್ಲೆಯಲ್ಲಿ 14 ಲಕ್ಷಕ್ಕೂ ಹೆಚ್ಚಿನ ಮತದಾರರಿದ್ದಾರೆ. ಮತದಾರರು ತಮ್ಮ ಚುನಾವಣಾ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಹೆಚ್ .ಎಲ್ ನಾಗರಾಜು ರವರು ತಿಳಿಸಿದರು

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರದ ಗುರುತಿನ ಚೀಟಿ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಕುರಿತು ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.ಇದನ್ನು ಓದಿ –ಸ್ವಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 50 ಲಕ್ಷ ರು ದೇಣಿಗೆ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್​

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಯ ಸಿಬ್ಬಂದಿಗಳು ತಮ್ಮ ಚುನಾವಣೆ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳಿಗೆ ಆಧಾರ್ ಜೋಡಣೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು, ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿ ಸಭೆಯನ್ನು ನಡೆಸಿ ಚುನಾವಣೆ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಕುರಿತು ಮಾಹಿತಿ ನೀಡಿ ವರದಿ ಸಲ್ಲಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾರರ ಗುರುತಿನ ಚೀಟಿ ಗೆ ಆಧಾರ್ ಜೋಡಣೆ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳು ಹಾಗೂ ಅವರ ಮನೆಗಳಲ್ಲೂ ಸಹ ಆಧಾರ್ ಕಾರ್ಡ್ ಜೋಡಣೆ ಮಾಡುವಂತೆ ತಿಳಿಸಬೇಕು ಎಂದರು.

ಆಧಾರ್ ಜೋಡಣೆಯ ಬಗ್ಗೆ ಆಂದೋಲನ ನಡೆಸಿ

ಜಿಲ್ಲೆಯಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಬರುವಂತಹ ಪಡಿತರ ಚೀಟಿದಾರರು, ಮಹಿಳಾ ಸಂಘಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಗರುಡಾ ಆ್ಯಪ್, ವಾಟರ್ ಹೆಲ್ಪ್ ಲೈನ್ ಆ್ಯಪ್ ಗಳ ಬಗ್ಗೆ ಮಾಹಿತಿ ನೀಡಿ ಮೊಬೈಲ್ ನಲ್ಲಿ ಸುಲಭವಾಗಿ ಜೋಡಣೆ ಕೆಲಸ ಮಾಡಬಹುದು ಎಂದರು.

ಆ್ಯಪ್ ಬಳಸಲು ಬರುವುದಿಲ್ಲ ಎಂದರೆ ಬಿ.ಎಲ್.ಒ ಗಳಿಗೆ ಆಧಾರ್ ಸಂಖ್ಯೆ ಜೋಡಣೆಗೆ ಒಪ್ಪಿಗೆ ಪತ್ರ ನೀಡಿದರೆ ಅವರು ಜೋಡಣೆ ಮಾಡಿಕೊಡುತ್ತಾರೆ. ಇಲಾಖೆಗಳು ಈ ಕುರಿತಂತೆ ಗುರಿ ನಿಗದಿಪಡಿಸಿಕೊಂಡು ಉತ್ತಮ‌ ಸಾಧನೆ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಮಂಡ್ಯ ವಿ.ವಿ ಕುಲಸಚಿವರಾದ ಡಾ.ನಾಗರಾಜ್ ಜಿ ಚೊಳ್ಳಿ, ಉಪವಿಭಾಗಾಧಿಕಾರಿ ಆರ್.ಐಶ್ವರ್ಯ,ಜಿ. ಪಂ. ಉಪ ಕಾರ್ಯದರ್ಶಿ ಸಂಜೀವಪ್ಪ, ತಹಶೀಲ್ದಾರ್ ಕುಂಇ ಅಹಮದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಮ ಮೂರ್ತಿ, ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ, , ಜಿಲ್ಲಾ ವಾರ್ತಾಧಿಕಾರಿ ಎಸ್ .ಹೆಚ್. ನಿರ್ಮಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Team Newsnap
Leave a Comment

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024