crime

ವಿದ್ಯಾರ್ಥಿಗಳಿಗೆ ಮದ್ಯ ಸರಬರಾಜು : ರಾಜಧಾನಿಯ 510 ಪಬ್, ಬಾರ್‌ಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ಮದ್ಯ ಸರಬರಾಜು ಮಾಡುತ್ತಿದ್ದ ಆರೋಪದ ಹಿನ್ನೆಲೆ ಬೆಂಗಳೂರಿನ 510 ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಶಾಸಕರ ಸಂಬಂಧಿಕರು ಎಂದು ಹೇಳಿಕೊಂಡಿರುವ ಕೆಲವು ಅಪ್ರಾಪ್ತರು ರೇಡ್ ವೇಳೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.

ಬೆಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ 510 ಕ್ಕೂ ಹೆಚ್ಚು ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ದಾಳಿ ನಡೆಸಿದರು.

ದಾಳಿ ವೇಳೆ ಅಬಕಾರಿ ನಿಯಮ ಸೇರಿದಂತೆ ಕಾನೂನುಗಳನ್ನು ಉಲ್ಲಂಘನೆ ಮಾಡುತ್ತಿದ್ದ ಆರೋಪದ ಮೇಲೆ ಕೆಲ ಪಬ್‌ಗಳ ಮೇಲೆ ಕೇಸ್ ಹಾಕಲಾಗಿದೆ.

ಇತ್ತೀಚೆಗೆ ಶಾಲಾ ಮುಖ್ಯಸ್ಥರು ಪೊಲೀಸ್ ಆಯುಕ್ತರಿಗೆ ಮನವಿಯೊಂದನ್ನು ಕೊಟ್ಟಿದ್ದರು. ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ನೀಡಲಾಗುತ್ತಿದೆ. ಇದನ್ನು ಸರಿಪಡಿಸುವಂತೆ ಕೇಳಿಕೊಂಡಿದ್ದರು. ಈ ಬಗ್ಗೆ ಕಮಿಷನರ್ ಅವರಿಂದ ನಿರ್ದೇಶನ ಪಡೆದು ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿ, ತಪಾಸಣೆ ನಡೆಸಿ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಪತ್ತೆ ಮಾಡಿದ್ದಾರೆ.

ಅನಧಿಕೃತವಾಗಿ ಪಬ್‌ಗಳಲ್ಲಿ ಧೂಮಪಾನಕ್ಕೆ ಅವಕಾಶ ಕೊಡಲಾಗಿದೆ. ಪ್ರತಿ ಪಬ್‌ಗಳಲ್ಲಿ ಧೂಮಪಾನಕ್ಕೆ ಪ್ರತ್ಯೇಕ ರೂಂ ವ್ಯವಸ್ಥೆ ಇರಬೇಕು. ಇದಲ್ಲದೆ ಅಬಕಾರಿ ನಿಯಮಗಳನ್ನು ಸಹ ಉಲ್ಲಂಘನೆ ಮಾಡಿದ್ದಾರೆ. ಅಪ್ರಾಪ್ತರಿಗೆ ಮದ್ಯ ನೀಡುತ್ತಿರೋದು ಕಂಡುಬಂದಿದ್ದು, ಜುವೆನಿಲ್ ಜಸ್ಟಿಸ್ ಆಕ್ಟ್ ಹಾಗೂ ಕೋಪ್ಟಾ ಆಕ್ಟ್ ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.ಜೆಡಿಎಸ್ – ಬಿಜೆಪಿ ಮೈತ್ರಿ : ಇನ್ನೂ ಆರಂಭಿಕ ಹಂತ – ಎಚ್ ಡಿ ಕೆ

ಬಾಣಸವಾಡಿಯ ಪಬ್ ಒಂದರಲ್ಲಿ ಕಿರುತೆರೆ ನಟಿಯರು ಎಂದು ಹೇಳಿಕೊಂಡ ಅಪ್ರಾಪ್ತೆಯರು ಮದ್ಯ ಸೇವನೆ ವೇಳೆ ಸಿಸಿಬಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ನಾವು ಮಾಜಿ ಸಚಿವ, ಹಾಲಿ ಶಾಸಕರ ಸಂಬಂಧಿಕರು ಅಂತಾ ವಾಗ್ವಾದ ನಡೆಸಿದ್ದಾರೆ.

Team Newsnap
Leave a Comment

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024