ರಾಜ್ಯ ಕೆಪಿಸಿಸಿಗೆ ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯು ನಿರೀಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಿದೆ. ಆ ಪಟ್ಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಜೆಡಿಎಸ್ನ ಹಾಲಿ ಶಾಸಕರ ಹೆಸರು ಇದ್ದು ಭಾರಿ ಕುತೂಹಲ ಮೂಡಿಸಿದೆ.‘ಮೋದಿ ಹತ್ಯೆ ಮಾಡಿ’ ಕರೆ ನೀಡಿದ್ದ ಕಾಂಗ್ರೆಸ್ ನಾಯಕ ಪಟೇರಿಯಾ ಬಂಧನ
ಹಾಲಿ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಕ್ಷ ತೊರೆದು ಕಾಂಗ್ರೆಸ್ನಿಂದ ಸ್ಪರ್ಧಿಸುತ್ತಾರಾ ಎಂಬ ಚರ್ಚೆಗೆ ಈ ಪಟ್ಟಿ ಅನುವು ನೀಡಿದೆ.
ಕಾಂಗ್ರೆಸ್ನ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಅರಸೀಕೆರೆಯಿಂದ ಟಿಕೆಟ್ ಎಂಬ ಚರ್ಚೆಗಳಿಗೆ ಈ ಪಟ್ಟಿ ಇನ್ನಷ್ಟು ಪುಷ್ಠಿ ನೀಡಿದೆ.
ಹಾಸನ ಜಿಲ್ಲಾ ಕಾಂಗ್ರೆಸ್ ನ ನಿರೀಕ್ಷಿತ ಅಭ್ಯರ್ಥಿಗಳ ವಿವರ :
- ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಕೆ.ಎಂ.ಶಿವಲಿಂಗೇಗೌಡ
- ಅರಕಲಗೂಡು ಕ್ಷೇತ್ರದಿಂದ ಹಾಲಿ ಬಿಜೆಪಿಯಲ್ಲಿರುವ ಹಾಗೂ ಮಾಜಿ ಸಚಿವ ಎ.ಮಂಜು,
- ಬೇಲೂರು ಕ್ಷೇತ್ರದಿಂದ ಮಾಜಿ ಸಚಿವ ಬಿ.ಶಿವರಾಂ
- ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ಹೆಚ್.ಸಿ.ಶ್ರೀಕಂಠಯ್ಯ ಹಿರಿಯ ಪುತ್ರ ಲಲಿತ್ ರಾಘವ್,
- ಹಾಸನ ವಿಧಾನಸಭಾ ಕ್ಷೇತ್ರದಿಂದ ಬಿ.ಕೆ.ರಂಗಸ್ವಾಮಿ ಅಲಿಯಾಸ್ ಬನವಾಸೆ ರಂಗಸ್ವಾಮಿ,
- ಹೊಳೆನರಸೀಪುರ ವಿಧಾನ ಸಭಾ ಕ್ಷೇತ್ರದಿಂದ ಶ್ರೇಯಸ್ ಪಟೇಲ್,
- ಆಲೂರು-ಸಕಲೇಶಪುರ ಕ್ಷೇತ್ರದಿಂದ ಮುರುಳಿ ಮೋಹನ್ಗೆ ಟಿಕೆಟ್ ಶಿಫಾರಸ್ಸು ಮಾಡಿ ಪಟ್ಟಿ ಕಳುಹಿಸಲಾಗಿದೆ


- ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ