ಈಗಿನ ಸರ್ಕಾರದಲ್ಲಿ ಸಾಹಿತಿಗಳಿಗೆ ರಕ್ಷಣೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಗವಾನ್ ಅವರಿಗೆ ಮಸಿ ಬಳಿದ ವಿಚಾರ ಕುರಿತಂತೆ ವಿಧಾನಸೌಧದಲ್ಲಿ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಂಪನಾ ಅವರು ಕಾನೂನಿಗೆ ವಿರುದ್ಧವಾಗಿ ಮಾತನಾಡಿರಲಿಲ್ಲ. ಆದರೂ ಅವರನ್ನು ಠಾಣೆಗೆ ಕರೆದು ವಿಚಾರಿಸಿ ಅವಮಾನ ಮಾಡಿದ್ದಾರೆ. ಇದೀಗ ಹಿರಿಯ ಸಾಹಿತಿ ಭಗವಾನ್ ಅವರಿಗೆ ನ್ಯಾಯಾಲಯದ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರೊ.ಕೆ.ಎಸ. ಭಗವಾನ್ ಅವರು ರಾಮನ ಬಗ್ಗೆ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅವರ ವಿರುದ್ಧ ಮೀರಾ ರಾಘವೇಂದ್ರ ಎಂಬುವರು ಪ್ರಕರಣ ಹೂಡಿದ್ದರು. ಅದಕ್ಕೆ ಜಾಮೀನು ಕೂಡ ಸಿಕ್ಕಿ ಅವರು ನ್ಯಾಯಾಲಯದ ಹೊರಗಡೆ ಬಂದ ಮೇಲೆ ಮಸಿ ಬಳಿದಿರುವುದು ಖಂಡನೀಯ ಎಂದು ಹೇಳಿಕೆ ನೀಡಿದ್ದಾರೆ.
ಹಿರಿಯ ಸಾಹಿತಿಗೆ ನ್ಯಾಯಾಲಯದ ಆವರಣದಲ್ಲೇ ಮಸಿ ಬಳಿದ ಮೀರಾ ರಾಘವೇಂದ್ರ ಒಬ್ಬ ಹೆಣ್ಣುಮಗಳೇ ಆಗಿದ್ದರೂ ಕೂಡ ಕ್ರಮಜರುಗಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment