ಮೈಸೂರಿನ ಮಾನಸಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕ ಹ.ಕ.ರಾಜೇಗೌಡ (83) ಗುರುವಾರ ಸಂಜೆ ವಿಧಿವಶರಾದರು.
ಮೂಲತಃ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಹನುಮನಹಳ್ಳಿ ಗ್ರಾಮದವರಾದ ರಾಜೇಗೌಡರು, ಮೈಸೂರಿನ ಸರಸ್ವತಿಪುರಂ ಬಡಾವಣೆಯಲ್ಲಿರುವ ಮಗಳು ಚೇತನಾ ಬಾಲಕೃಷ್ಣ ಅವರೊಂದಿಗೆ ಇದ್ದರು. ಇವರು ಪುತ್ರ ದಿನೇಶ್ ಚಂದ್ರ ಹಾಗೂ ಅಳಿಯ ಐಪಿಎಸ್ ಅಧಿಕಾರಿ ಕೆ.ಟಿ.ಬಾಲಕೃಷ್ಣ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಹನುಮನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕರಾಗಿ ಮಾತ್ರವಲ್ಲದೆ, ಎನ್ ಜಿಇಎಫ್ ನ ವಿಶೇಷಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು.
ಗ್ರಂಥ ಸಂಪಾದನೆ, ಅನುವಾದ, ಇತಿಹಾಸ, ಜೀವನ ಚರಿತ್ರೆ, ನಾಟಕ, ಸಂಶೋಧನೆ, ವಿಮರ್ಶೆ, ಸಂಕಲನಗಳು, ಅಭಿನಂದನಾ ಗ್ರಂಥಗಳು ಸೇರಿದಂತೆ ಸುಮಾರು 62 ಕೃತಿಗಳನ್ನು ಸಂಪಾದಿಸಿದ್ದಾರೆ.
ಜಿಶಂಪ ಜಾನಪದ ಪ್ರಶಸ್ತಿ, ಚುಂಚಶ್ರೀ ಪ್ರಶಸ್ತಿ, ಎಮ್.ಎಲ್.ಶ್ರೀಕಂಠೇಗೌಡ ಸಂಶೋಧನಾ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಎಚ್.ಡಿ.ಚೌಡಯ್ಯ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ