ಮೈಸೂರಿನ ಮಾನಸಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕ ಹ.ಕ.ರಾಜೇಗೌಡ (83) ಗುರುವಾರ ಸಂಜೆ ವಿಧಿವಶರಾದರು.
ಮೂಲತಃ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಹನುಮನಹಳ್ಳಿ ಗ್ರಾಮದವರಾದ ರಾಜೇಗೌಡರು, ಮೈಸೂರಿನ ಸರಸ್ವತಿಪುರಂ ಬಡಾವಣೆಯಲ್ಲಿರುವ ಮಗಳು ಚೇತನಾ ಬಾಲಕೃಷ್ಣ ಅವರೊಂದಿಗೆ ಇದ್ದರು. ಇವರು ಪುತ್ರ ದಿನೇಶ್ ಚಂದ್ರ ಹಾಗೂ ಅಳಿಯ ಐಪಿಎಸ್ ಅಧಿಕಾರಿ ಕೆ.ಟಿ.ಬಾಲಕೃಷ್ಣ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಹನುಮನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕರಾಗಿ ಮಾತ್ರವಲ್ಲದೆ, ಎನ್ ಜಿಇಎಫ್ ನ ವಿಶೇಷಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು.
ಗ್ರಂಥ ಸಂಪಾದನೆ, ಅನುವಾದ, ಇತಿಹಾಸ, ಜೀವನ ಚರಿತ್ರೆ, ನಾಟಕ, ಸಂಶೋಧನೆ, ವಿಮರ್ಶೆ, ಸಂಕಲನಗಳು, ಅಭಿನಂದನಾ ಗ್ರಂಥಗಳು ಸೇರಿದಂತೆ ಸುಮಾರು 62 ಕೃತಿಗಳನ್ನು ಸಂಪಾದಿಸಿದ್ದಾರೆ.
ಜಿಶಂಪ ಜಾನಪದ ಪ್ರಶಸ್ತಿ, ಚುಂಚಶ್ರೀ ಪ್ರಶಸ್ತಿ, ಎಮ್.ಎಲ್.ಶ್ರೀಕಂಠೇಗೌಡ ಸಂಶೋಧನಾ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಎಚ್.ಡಿ.ಚೌಡಯ್ಯ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment