Karnataka

ಶಿವಮೊಗ್ಗ, ಬಳ್ಳಾರಿಯಲ್ಲಿ ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪ್ರಸಿದ್ದ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ವಿವಿಧ ಪ್ರಸಿದ್ದ ಖಾಸಗಿ ಕಂಪನಿಗಳು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಉಚಿತ ಪ್ರವೇಶ ಇರುತ್ತದೆ.

ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದು

ಬಳ್ಳಾರಿಯಲ್ಲಿ ಉದ್ಯೋಗ ಮೇಳ ಆಯೋಜನೆ
ಬಳ್ಳಾರಿ :

ಬಳ್ಳಾರಿ ನಗರದ ಡೊಮಿನೋಸ್ ಪಿಜ್ಜಾ ಕಂಪನಿಯಲ್ಲಿ ಖಾಲಿ ಇರುವ ಡೆಲಿವರಿ ಬಾಯ್ಸ್ ಹುದ್ದೆಗಳಿಗೆ ಮಾ.14ರಂದು ಪಾರ್ವತಿ ನಗರದ ಏರ್ಟೆಲ್ ಆಫೀಸ್ ಹತ್ತಿರದ ಜೈ ಶ್ರೀರಾಮ್ ಬಿಲ್ಡಿಂಗ್ ನ ನೆಲಮಹಡಿಯ ಸಂಖ್ಯೆ.6 ಮಹಡಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ(ಬಯೋಡೆಟಾ) ತಪ್ಪದೇ ತರಬೇಕು. ಡೆಲಿವರಿ ಬಾಯ್ಸ್ ಹುದ್ದೆಗಳು 30 ಇದೆ. ವಿದ್ಯಾರ್ಹತೆಯು ಎಸ್‌ಎಸ್‌ಎಲ್ಸಿ, ಪಿಯುಸಿ ಹೊಂದಿರಬೇಕು ಮತ್ತು ದ್ವಿ-ಚಕ್ರ ವಾಹನ ಲೈಸೆನ್ಸ್, ಸ್ಮಾರ್ಟ್ಫೋನ್ ಕಡ್ಡಾಯವಾಗಿ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಾಹನದ ವ್ಯವಸ್ಥೆಯನ್ನು ಕಂಪನಿಯವರೇ ನೀಡುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಡೊಮಿನೋಸ್ ಪಿಜ್ಜಾ ಕಂಪನಿ ಅಥವಾ ಮೊ.9980346209, 9035869337, 9019692898, 7892971984 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ : ಭಾರತಕ್ಕೆ ಚಿನ್ನದ ಗರಿ 

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024