ಎಲ್ ಓಸಿಯಲ್ಲಿ ಎರಡೂ ಕಡೆಯ ಸೇನೆಯ ನಡುವೆ ಶಾಂತಿ ತೀವ್ರವಾಗಿ ಹದಗೆಟ್ಟಿದೆ. ಇದು ಭಾರತ-ಚೀನಾದ ಸಂಬಂಧದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಭಾರತದ ವಿದೇಶಾಂಗ ಎಸ್.ಜೈ ಶಂಕರ್ ತಿಳಿಸಿದರು.
‘ಭಾರತ ಚೀನಾ ನಡುವಣ ಸಂಬಂಧ ತೀರಾ ಸಂಕೀರ್ಣ ಮತ್ತು ಕಠಿಣವಾಗಿದೆ. 1980 ರಿಂದ ವ್ಯಾಪಾರ, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ರಮಗಳಿಂದ ಸಹಜ ಸ್ಥಿತಿಗೆ ಬಂದಿತ್ತು. ಗಡಿ ಪ್ರಶ್ನೆಯನ್ನು ಇತ್ಯರ್ಥಗೊಳಿಸಬೇಕು ಎಂಬುದು ನಮ್ಮ ನಿಲುವಲ್ಲ, ಗಡಿ ಪ್ರಶ್ನೆಗಳು ತೀರಾ ಸಂಕೀರ್ಣ ಹಾಗೂ ಕಠಿಣವಾದ ವಿಷಯಗಳಾಗಿವೆ ಎಂಬುದು ನಮಗೂ ಗೊತ್ತು. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ. ಒಂದು ದ್ವಿಪಕ್ಷೀಯ ಸಂಬಂಧಕ್ಕೆ ಇದು ಅತ್ಯಂತ ಹೆಚ್ಚಿನ ಮಟ್ಟದ ನಿರೀಕ್ಷೆಯಾಗಿದೆ’ ಎಂದು ಭಾರತ-ಚೀನಾ ನಡುವಿನ ಸಂಬಂಧದ ಬಗ್ಗೆ ಐತಿಹಾಸಿಕ ಮಾಹಿತಿಗಳು ಹಾಗೂ ಕಳೆದ 3 ದಶಕಗಳ ಅಭಿವೃದ್ಧಿಯ ಕುರಿತ ದಿ ಇಂಡಿಯಾ ವೇ ಎಂಬ ತಮ್ಮ ಪುಸ್ತಕದ ಬಗ್ಗೆ ವೆಬಿನಾರ್ ಕಾರ್ಯಕ್ರಮದಲ್ಲಿ ಎಸ್. ಜೈ ಶಂಕರ್ ಮಾತನಾಡಿದ್ದಾರೆ.
ಭಾರತ ಮತ್ತು ಚೀನಾ ಜಾಗತಿಕ ಮಟ್ಟದಲ್ಲಿ ಬಹುದೊಡ್ಡ ನಿರ್ಣಾಯಕ ಪಾತ್ರಗಳನ್ನು ವಹಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಉಭಯ ದೇಶಗಳು ಹೇಗೆ ಸಮತೋಲನ ಕಾಪಾಡಿಕೊಂಡು ಬರುತ್ತವೆ ಎಂಬುದು ಪ್ರಶ್ನೆಯ ಅಂಶವಾಗಿದೆ ಎಂದು ಅವರು ಭಾರತ-ಚೀನಾ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿದರು.
ಕಳೆದ 5 ತಿಂಗಳಿನಿಂದಲೂ ಲಡಾಖ್ನ ಎಲ್ ಓಸಿಯಲ್ಲಿ ಎರಡೂ ಸೇನೆಗಳ ನಡುವಿನ ಘರ್ಷಣೆಯಿಂದ ಅಶಾಂತಿ ಹೊಗೆಯಾಡುತ್ತಿದೆ. ಉಭತ ದೇಶಗಳು ಎಲ್ ಓಸಿಯಲ್ಲಿ 50,000 ಸೈನಿಕರನ್ನು ನಿಯೋಜನೆ ಮಾಡಿವೆ. ಒಂದೆಡೆ ಭಾರತ-ಚೀನಾ ನಡುವೆ ಶಾಂತಿ ಮಾತುಕತೆಗಳು ನಡೆಯಿತ್ತಿವೆ. ಇಂತಹ ಉದ್ವಿಗ್ನ ಪರಿಸ್ಥಿತಿಯಲ್ಲಿ ಜೈ ಶಂಕರ್ ಅವರ ಹೇಳಿಕೆ ಮಹತ್ವವನ್ನು ಪಡೆದಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment