14 ದಿನಗಳ ಲಾಕ್ಡೌನ್ ಘೋಷಣೆ ನಂತರ ಬೆಂಗಳೂರಿನಿಂದ ಜನರ ಗುಳೆ ಮಂಗಳವಾರ ಬೆಳಗ್ಗೆಯೂ ಮುಂದುವರಿದಿದೆ.
ಜನರು ಲಗೇಜುಗಳ ಸಮೇತ ಬೆಂಗಳೂರು ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ನಿಲ್ದಾಣಗಳತ್ತ ಆಗಮಿಸುತ್ತಿದ್ದಾರೆ. ಇನ್ನು ಸಿಕ್ಕ ಸಿಕ್ಕ ಖಾಸಗಿ ವಾಹನಗಳನ್ನು ಹಿಡಿದು ಊರು ಸೇರಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.
ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದೊಡ್ಡ ಮಟ್ಟದಲ್ಲಿ ಸಂಚಾರ ಸಮಸ್ಯೆ ಉಂಟಾಗಿದೆ. ಪೊಲೀಸರು ಸಂಚಾರ ಸುಗಮ ಮಾಡಲು ಮುಂದಾಗಿದ್ದಾರೆ
ಎಲೆಕ್ಟ್ರಾನಿಕ್ ಸಿಟಿ ಹೊರ ಭಾಗ, ಮೈಸೂರು ರೋಡ್, ನೆಲಮಂಗಲ ನವಯುಗ ಟೋಲ್ ಗೇಟ್ ಬಳಿ ಜನರ ಸಾಗರವೇ ನೆರದಿದೆ.
ಚಿಕ್ಕ ಮಕ್ಕಳೊಂದಿಗೆ ನಾಲ್ಕೈದು ಬ್ಯಾಗ್ ಹಿಡಿದು ತಮ್ಮೂರ ಬಸ್ ಗಳಿಗಾಗಿ ಜನರು ಕಾಯುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.
ಬೆಂಗಳೂರಿನಿಂದ ಸಮೀಪದಲ್ಲಿರುವ ಹಳ್ಳಿಯ ಜನರು ಬಹುತೇಕ ತಮ್ಮ ದ್ವಿಚಕ್ರ ವಾಹನಗಳಲ್ಲಿ ಊರಿನತ್ತ ಹೊರಟಿದ್ದಾರೆ. ಅದೇ ರೀತಿಯಾಗಿ ರೈಲ್ವೇ ನಿಲ್ದಾಣಗಳಲ್ಲಿ ಹೆಚ್ಚಾಗಿ ಅಂತರ್ ರಾಜ್ಯ ಪ್ರಯಾಣಿಕರು ಕಾಣ ಸಿಗುತ್ತಿದ್ದಾರೆ.
ಬೆಂಗಳೂರಿನಿಂದ ಎಲ್ಜಾ ಜಿಲ್ಲೆಗಳಿಗೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಳದ ಹಿನ್ನೆಲೆ ಸಾರಿಗೆ ಇಲಾಖೆ ಸಹ ಬಸ್ ವ್ಯವಸ್ಥೆ ಮಾಡುತ್ತಿದೆ. ಬೆಂಗಳೂರಿನ ಸುತ್ತಮುತ್ತ ಸ್ಥಳಗಳಿಗೆ ತೆರಳಲು ಬಿಎಂಟಿಸಿ ಬಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ