ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಜೂನ್ 21 ರವರೆಗೆ ಮುಂದುವರೆಯಲಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಗುರುವಾರ ರಾತ್ರಿ ಪ್ರಕಟಿಸಿದರು.
ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆ ಲಾಕ್ಡೌನ್ ಮುಂದುವರೆಸಬೇಕೆ ಅಥವಾ ಸಡಿಲ ಮಾಡಬೇಕೆ ಎಂಬ ವಿಷಯವಾಗಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅನ್ ಲಾಕ್ ಸಂಬಂಧಿಸಿದಂತೆ ಮುಖ್ಯ ಮಾಹಿತಿ ನೀಡಿದರು.
- 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳಲ್ಲಿ ಸಡಿಲಿಕೆ.
- ಉಳಿದ ಜಿಲ್ಲೆಗಳಲ್ಲಿ ಜೂನ್ 14 ರಿಂದ ಸಡಿಲಿಕೆ ಜಾರಿ.
- ಈ ಜಿಲ್ಲೆಗಳಲ್ಲಿ ಎಲ್ಲಾ ಕಾರ್ಖಾನೆ ತೆರೆಯಲು ಅವಕಾಶವಿದೆ. ಆದರೆ ಶೇ 50 ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ.
- ಗಾರ್ಮೆಂಟ್ಗಳಲ್ಲಿ ಮಾತ್ರ ಕೇವಲ ಶೇ. 30 ರಷ್ಟು ಸಿಬ್ಬಂದಿಗೆ ಅವಕಾಶ.
- ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ.
- ನಿರ್ಮಾಣಕ್ಕೆ ಸಂಬಂಧಿಸಿದ ಅಂಗಡಿಗಳಿಗೆ ತೆರೆಯಲು ಅವಕಾಶ.