ರಾಜ್ಯದಲ್ಲಿ ಲಾಕ್​ಡೌನ್ ಸಡಿಲಿಕೆ – 11 ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರಿಕೆ – ಸಿಎಂ ಪ್ರಕಟ

Team Newsnap
1 Min Read

ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್​ಡೌನ್ ಜೂನ್ 21 ರವರೆಗೆ ಮುಂದುವರೆಯಲಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡಲಾಗುತ್ತಿದೆ ಎಂದು ಸಿಎಂ‌ ಯಡಿಯೂರಪ್ಪ ಗುರುವಾರ ರಾತ್ರಿ ಪ್ರಕಟಿಸಿದರು.

ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆ ಲಾಕ್​ಡೌನ್​ ಮುಂದುವರೆಸಬೇಕೆ ಅಥವಾ ಸಡಿಲ ಮಾಡಬೇಕೆ ಎಂಬ ವಿಷಯವಾಗಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅನ್ ಲಾಕ್ ಸಂಬಂಧಿಸಿದಂತೆ ಮುಖ್ಯ ಮಾಹಿತಿ ನೀಡಿದರು.

  • 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳಲ್ಲಿ ಸಡಿಲಿಕೆ.
  • ಉಳಿದ ಜಿಲ್ಲೆಗಳಲ್ಲಿ ಜೂನ್ 14 ರಿಂದ ಸಡಿಲಿಕೆ ಜಾರಿ.
  • ಈ ಜಿಲ್ಲೆಗಳಲ್ಲಿ ಎಲ್ಲಾ ಕಾರ್ಖಾನೆ ತೆರೆಯಲು ಅವಕಾಶವಿದೆ. ಆದರೆ ಶೇ 50 ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ.
  • ಗಾರ್ಮೆಂಟ್​ಗಳಲ್ಲಿ ಮಾತ್ರ ಕೇವಲ ಶೇ. 30 ರಷ್ಟು ಸಿಬ್ಬಂದಿಗೆ ಅವಕಾಶ.
  • ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ.
  • ನಿರ್ಮಾಣಕ್ಕೆ ಸಂಬಂಧಿಸಿದ ಅಂಗಡಿಗಳಿಗೆ ತೆರೆಯಲು ಅವಕಾಶ.
Share This Article
Leave a comment