ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಪ್ರಬಲ ವಾಗಿದೆ ಲೋಕಸಭಾ ಚುನಾವಣೆ ಬಗ್ಗೆ ಪಕ್ಷದ ವರಿಷ್ಠರಿಗೆ ಒಂದು ಸಾಲಿನ ನಿರ್ಣಯ ಕಳುಹಿಸಲಿದ್ದೇವೆ. ನಮ್ಮೆಲ್ಲರ ಅಭಿಪ್ರಾಯಕ್ಕೆ ಮನ್ನಣೆ ಸಿಗಲಿದೆ ಎಂದರು.
ಚುನಾವಣೆಗೂ ಮುನ್ನ ಜೆಡಿಎಸ್ ಮೈತ್ರಿಯಾದ ಇತಿಹಾಸ ಇರಲಿಲ್ಲ. ದೇವೇಗೌಡರು ಮಾಜಿ ಪ್ರಧಾನಿಗಳು ಅವರ ಬಗ್ಗೆ ಗೌರವವಿದೆ. ಬಿಜೆಪಿ ಜೆಡಿಎಸ್ ಗೆ ಮೈತ್ರಿ ಅನಿವಾರ್ಯ. ನಮಗೆ ಅದರ ಬಗ್ಗೆ ಚಿಂತೆ ಇಲ್ಲ. ಇಬ್ಬರಿಗೂ ಒಬ್ಬರಿಗೊಬ್ಬರು ಅನಿವಾರ್ಯ. ನಮಗೆ ಇವರು ಅನಿವಾರ್ಯ ಅಲ್ಲ, ನಮಗೆ ಜನರು ಅನಿವಾರ್ಯ ಎಂದರು.
ಕಾವೇರಿ ನೀರು ವಿಚಾರವಾಗಿ ಕೇಂದ್ರ ಸ್ಪಂದಿಸಲು ತಯಾರಿಲ್ಲ. ಬರದ ಪರಿಸ್ಥಿತಿ ಹೇಳಲು ಭೇಟಿಗೆ ಅವಕಾಶ ನೀಡುತ್ತಿಲ್ಲ. ಇಂತಹವರ ಜೊತೆ ಈಗ ಜೆಡಿಎಸ್ ಜೊತೆಯಾಗಿದ್ದಾರೆ ಎಂದರು.
ಕಾವೇರಿ ಬಗ್ಗೆ ಮಾತನಾಡುವ ಯಡಿಯೂರಪ್ಪ ಬೊಮ್ಮಾಯಿ, ಕುಮಾರಸ್ವಾಮಿ, ಪ್ರಧಾನಿ ಬಳಿ ಹೋಗಬಹುದಿತ್ತು. ರಾಜ್ಯದ ಹಿತಕ್ಕಾಗಿ ನೀವು ಮಧ್ಯಪ್ರವೇಶಿಸಿ ಎನ್ನಬಹುದಿತ್ತು. ಆದರೆ ಅವರಿಗೆ ರಾಜ್ಯದ ಜನರ ಹಿತ ಕಾಯುವ ಆಸಕ್ತಿ ಇಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಅಭಿವೃದ್ಧಿಗೂ ಪಣತೊಟ್ಟಿದೆ. ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ನೀಡುತ್ತಿದ್ದೇವೆ ಎಂದರು.
ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಮಾತನಾಡಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಿಎಂ, ಡಿಸಿಎಂಗೆ ಬಿಟ್ಟಿದ್ದೇವೆ. ಕಾರ್ಯಕರ್ತರು, ಮುಖಂಡರು ಒಮ್ಮತದ ನಿರ್ಧಾರ ತಿಳಿಸಿದ್ದಾರೆ. ಪಕ್ಕಕ್ಕಾಗಿ ಕೆಲಸ ಮಾಡಿದವರೆ ಅಭ್ಯರ್ಥಿ ಆಗಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಗೆಲ್ಲಲು ಹಿರಿಯ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.2024ಕ್ಕೆ ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಪ್ರಯಾಣ- ನೌಕೆಯ ಚಿತ್ರ ಬಿಡುಗಡೆ
ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಣ್ಣ,ಶಾಸಕರಾದ, ಪಿ.ಎಂ ನರೇಂದ್ರಸ್ವಾಮಿ,ರಮೇಶ ಬಾಬು ಬಂಡಿಸಿದ್ದೇಗೌಡ,ದಿನೇಶ್ ಗೂಳಿಗೌಡ,ಮಧು ಜಿ ಮಾದೇಗೌಡ,ಮಾಜಿ ಶಾಸಕರಾದ ಬಿ.ರಾಮಕೃಷ್ಣ,ಹೆಚ್.ಬಿ.ರಾಮು,ಕೆ.ಬಿ.ಚಂದ್ರಶೇಕರ್,ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಪಕ್ಷದ ಮುಖಂಡರುಗಳು ಹಾಜರಿದ್ದರು.
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
This website uses cookies.
Leave a Comment