ಮಂಡ್ಯ :
ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿ ಇಂಜಿನಿಯರ್ ಗಳ ಮನೆಗಳಲ್ಲಿ ದಾಖಲಾತಿ ಪರಿಶೀಲನೆ ಕೈಗೊಂಡಿದ್ದಾರೆ.
ಮಳವಳ್ಳಿ ಮತ್ತು ಮದ್ದೂರು ತಾಲೂಕಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದಾರೆ.
ಮೈಸೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿ ಇಂಜಿನಿಯರ್ ಬಾಲರಾಜು ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ರವರ ಮನೆಗಳಲ್ಲಿ ಶೋಧ ನಡೆಸಿದರು.
ಇಂಜಿನಿಯರ್ ಬಾಲರಾಜು ಮಳವಳ್ಳಿ ತಾಲೂಕಿನ ನಂಜೇಗೌಡನ ದೊಡ್ಡಿಯ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿ ಸುಚಿತ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲಾತಿ ಪರಿಶೀಲಿಸಿದರು.
ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್