ಆರೋಪದ ಹಿನ್ನೆಲೆ:
ಡಾ. ಉಮೇಶ್ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆಗೆ ಸೇರ್ಪಡೆಯಾಗಿದ್ದು, 2023 ರಿಂದ ಕಡೂರು ತಾಲೂಕು ವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2020 ರಿಂದ 2023ರವರೆಗೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದವರು, ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಕಾನೂನುಬದ್ದ ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಆಸ್ತಿ ವಿವರಗಳು:
ಡಾ. ಉಮೇಶ್ ತಮ್ಮ ಪತ್ನಿ ಟಿ.ಎಸ್. ಮಂಜುಳ ಮತ್ತು ಕುಟುಂಬ ಸದಸ್ಯರ ಹೆಸರಿನಲ್ಲಿ ವಿವಿಧ ಪ್ರಕಾರದ ಸ್ಥಿರಾಸ್ತಿ ಹಾಗೂ ಚರಾಸ್ತಿಯನ್ನು ಖರೀದಿ ಮಾಡಿರುವುದಾಗಿ ಹೇಳಲಾಗಿದೆ. ಅವರಿಬ್ಬರು ಮಕ್ಕಳು ರಾಯಚೂರು ಮತ್ತು ದಾವಣಗೆರೆ ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಲೋಕಾಯುಕ್ತ ದಾಳಿ:
ಆದಾಯಕ್ಕೆ ಅನುಗುಣವಾಗದ ಆಸ್ತಿ ಸಂಪಾದನೆ ಸಂಬಂಧ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದಾರೆ. ಅಧಿಕಾರಿಗಳು ಡಾ. ಉಮೇಶ್ ಅವರ ಆಸ್ತಿ-ಪಾಸ್ತಿ ದಾಖಲೆಗಳನ್ನು ಪರಿಶೀಲನೆಗೊಳಪಡಿಸಿದ್ದಾರೆ.
ಮುಂದಿನ ಕ್ರಮ:
ಲೋಕಾಯುಕ್ತ ಅಧಿಕಾರಿಗಳ ತನಿಖೆ ಮುಂದುವರಿಯುತ್ತಿದೆ. ಡಾ. ಉಮೇಶ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.ಇದನ್ನು ಓದಿ –KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
ಸರ್ಕಾರದ ಪ್ರತಿಬದ್ದತೆ:
ಆಧಿಕಾರಿಗಳನ್ನು ದುರುಪಯೋಗ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು