ಉತ್ತರ ಪ್ರದೇಶ್ ಸಿಎಂ ಯೋಗಿ ಆದೇಶದ ನಂತರ ಯುಪಿಯಲ್ಲಿ ಧಾರ್ಮಿಕ ಸ್ಥಳಗಳಲ್ಲಿ 6,000 ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ. ಇದುವರೆಗೂ 29,600 ಸ್ಥಳಗಳಲ್ಲಿ ಧ್ವನಿ ಕಡಿಮೆಯಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆದೇಶದ ನಂತರ, ಉತ್ತರ ಪ್ರದೇಶ ಪೊಲೀಸರು 6,031 ಧ್ವನಿವರ್ಧಕಗಳನ್ನು ತೆಗೆದುಹಾಕಿಸಿದ್ದಾರೆ ಮತ್ತು 29,674 ಧ್ವನಿವರ್ಧಕಗಳ ಧ್ವನಿಯನ್ನು ಮಿತಿಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.
ಜಿಲ್ಲಾಡಳಿತದಿಂದ ಸೂಕ್ತ ಅನುಮತಿ ಪಡೆಯದೆ ಹಾಕಲಾಗಿರುವ ಧ್ವನಿವರ್ಧಕಗಳು ಅಥವಾ ಅನುಮತಿಸಲಾದ ಸಂಖ್ಯೆಗಳಿಗಿಂತ ಹೆಚ್ಚು ಇರಿಸಲಾದ ಧ್ವನಿವರ್ಧಕಗಳನ್ನು ಅನಧಿಕೃತ ಎಂದು ವರ್ಗೀಕರಿಸಿ ಅಕ್ರಮವಾಗಿದ್ದ ಧ್ವನಿ ವರ್ಧಕಗಳನ್ನು ತೆಗೆದು ಹಾಕಲಾಯಿತು.
ಮೈಕ್ ಬಳಸಬಹುದಾದರೂ, ಯಾವುದೇ ಆವರಣದಿಂದ ಧ್ವನಿ ಬರದಂತೆ ನೋಡಿಕೊಳ್ಳಬೇಕು. ಜನರು ಯಾವುದೇ ಸಮಸ್ಯೆ ಎದುರಿಸಬಾರದು ಎಂದು ಆ ಅಧಿಕಾರಿ ಹೇಳಿದರು.
ಬುಧವಾರ ಪೊಲೀಸ್ ಇಲಾಖೆ ನೀಡಿದ ಮಾಹಿತಿಯ ಪ್ರಕಾರ ವಾರಣಾಸಿ ವಲಯದ ಜಿಲ್ಲೆಗಳಲ್ಲಿ ಗರಿಷ್ಠ 1,366 ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ, ಮೀರತ್ (1,215), ಬರೇಲಿ (1,070) ಮತ್ತು ಕಾನ್ಪುರ (1,056) ನಂತರದ ಜಿಲ್ಲೆಗಳಲ್ಲಿ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ.
ಕಾರ್ಪೊರೇಷನ್ ಅಧಿಕಾರಿಗಳು ಮತ್ತು ಪೊಲೀಸರನ್ನು ಒಳಗೊಂಡ ಜಂಟಿ ತಂಡವು ನಗರಗಳಲ್ಲಿ ಈ ಕಸರತ್ತು ನಡೆಸಿ ಅಕ್ರಮ ಮೈಕ್ ಗಳನ್ನು ತೆರವುಗೊಳಸಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment