ಪ್ರೇಮ ವೈಫಲ್ಯಕ್ಕೆ ಬೇಸತ್ತು ವೈದ್ಯೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ಜರುಗಿದೆ
ವೈಶಾಲಿ ಗಾಯಕ್ವಾಡ್ (25)ಆತ್ಮಹತ್ಯೆಗೆ ಶರಣಾದ ವೈದ್ಯೆ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಇಂಟರ್ನ್ ಶಿಪ್ನಲ್ಲಿದ್ದ ವೈಶಾಲಿ, ಎಂಬಿಬಿಎಸ್ ಕ್ಲಾಸ್ಮೇಟ್ ಆಗಿದ್ದ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.
ವೈಶಾಲಿ ಹಾಗೂ ಸುಜೀತ್ ನಡುವೆ ವೈಮನಸ್ಸು ಉಂಟಾಗಿದ್ದ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.
ಸದ್ಯ ಉಳ್ಳಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸುಜೀತ್ನನ್ನು ವಶಕ್ಕೆ ಪಡೆದಿದ್ದಾರೆ.