Categories: Main News

ಪ್ರೀತಿ – ಪ್ರೇಮ ಎಂಬ ಭಾವದ ಸುಳಿಯಲ್ಲಿ

ಪ್ರೀತಿಯ ಆಳದ ಹುಡುಕಾಟ………
ಪ್ರೀತಿಯ ಸೆಳೆತದ ಕೆಲವು ಉದಾಹರಣೆಗಳನ್ನು ನೋಡಿ…….

ತಾಯಿಯ ಕರುಳ ಬಳ್ಳಿಯ ಸಂಬಂಧ, ತಂದೆ ತಾಯಿ ಅಣ್ಣ ತಂಗಿ ಅಕ್ಕ ತಮ್ಮ ಅಜ್ಜ ಅಜ್ಜಿ ಮುಂತಾದ ದೀರ್ಘಕಾಲದ ರಕ್ತ ಸಂಬಂದಗಳನ್ನು ಮೀರಿ ಕೇವಲ ಒಂದೋ ಎರಡೋ ವರ್ಷದ ಪ್ರೀತಿಗಾಗಿ, ರೈಲಿಗೆ ತಲೆ ಕೊಡಲು, ಕುತ್ತಿಗೆಗೆ ನೇಣು ಬಿಗಿದುಕೊಳ್ಳಲು, ವಿಷ ಕುಡಿಯಲು, ಬೆಂಕಿ ಹಚ್ಚಿಕೊಳ್ಳಲು, ಎತ್ತರದಿಂದ ಜಿಗಿಯಲು, ನೀರಿಗೆ ಹಾರಲು ಮನಸ್ಸನ್ನು ಪ್ರೀತಿ ಪ್ರೇರೇಪಿಸುತ್ತದೆ ಎಂದರೆ ಅದರ ತೀವ್ರತೆ ಎಷ್ಟಿರಬಹುದು.

ಈ ಪ್ರೀತಿ ಕಾಲದ ಪರಿವೆಯೇ ಇಲ್ಲದೆ ಅನಾದಿ ಕಾಲದಿಂದ ಈ ಕ್ಷಣದವರೆಗೂ ಅದೇ ಉತ್ಕಟತೆಯನ್ನು ಉಳಿಸಿಕೊಂಡಿದೆ.

ಪ್ರೀತಿಗಾಗಿ ಎಷ್ಟೋ ರಾಜ್ಯಗಳೂ ಉರುಳಿವೆ, ಹಾಗೆ ಪ್ರೀತಿಗಾಗಿ ಎಷ್ಟೋ ಅಧಿಕಾರ ತ್ಯಾಗಗಳೂ ಆಗಿವೆ.

ಒಮ್ಮೆ ಪ್ರೇಮಿಗಳಲ್ಲಿ ಪ್ರೀತಿಯ ಭಾವ ಮೊಳಕೆ ಒಡೆದು ಹೆಮ್ಮರವಾದರೆ ಮುಗಿಯುತು. ಯಾವ ಅಡ್ಡಿ ಆತಂಕಗಳೂ ಅವರನ್ನು ಬೇರ್ಪಡಿಸುವುದು ಸಾಧ್ಯವಿಲ್ಲ. ಅದಕ್ಕೆ ಅಡ್ಡಿಯಾದವರನ್ನು ಕೊಲ್ಲುತ್ತಾರೆ ಅಥವಾ ಸ್ವತಃ ತಾವೇ ಸಾವಿಗೆ ಶರಣಾಗುತ್ತಾರೆ.

ಪ್ರೀತಿಗೆ ಜಾತಿ ವಯಸ್ಸು ಲಿಂಗ ಭಾಷೆ ಪ್ರದೇಶಗಳ ಹಂಗು ಇರುವುದಿಲ್ಲ. ಅಷ್ಟೇ ಏಕೆ ನೈತಿಕತೆಯ ಮೂಗುದಾರವೂ ಇರುವುದಿಲ್ಲ.
( ಕಾಮ ಪ್ರೀತಿಯ ಒಂದು ಭಾಗವೇ ಹೊರತು ಕಾಮವೇ ಪ್ರಧಾನವಾದಾಗ ಅದನ್ನು ಪ್ರೀತಿ ಎಂದು ಪರಿಗಣಿಸಲು ಸಾಧ್ಯವಿಲ್ಲ. )
ನಾನು ಹೇಳುತ್ತಿರುವುದು ನಿಜ ಪ್ರೀತಿಯ ಬಗ್ಗೆ ಮಾತ್ರ.

ಪ್ರೀತಿಯ ಇನ್ನೊಂದು ಅತಿರೇಕವೆಂದರೆ, ಪ್ರೀತಿಗೆ ಯಾವುದೇ ಕಾರಣದಿಂದ ಧಕ್ಕೆಯಾದರೆ ಅದರ ರೂಪ ವೈರಾಗ್ಯ ಅಥವಾ ದ್ವೇಷದ ರೂಪ ತಾಳುತ್ತದೆ. ಅದರಲ್ಲೂ ಹದಿಹರೆಯದಲ್ಲಿ ಅದು ತೀವ್ರ ದ್ವೇಷಕ್ಕೆ ತಿರುಗುತ್ತದೆ. ನನಗೆ ಸಿಕ್ಕದ ಆ ಪ್ರೇಮಿ ಯಾರಿಗೂ ಸಿಗಬಾರದು ಎಂಬ ಭಾವನೆ ಬಲವಾಗಿ ಅದು ಬರ್ಬರ ಕೊಲೆ ಮಾಡಿಸುತ್ತದೆ. ಹೆಣ್ಣು ಗಂಡು ಇಬ್ಬರಲ್ಲೂ ಈ ದ್ವೇಷ ಸಮ ಪ್ರಮಾಣದಲ್ಲಿ ಇದ್ದರೂ ನಮ್ಮ ಸಾಮಾಜಿಕ ವ್ಯವಸ್ಥೆಯ ಕಾರಣಕ್ಕಾಗಿ ಯುವಕರೇ ಅತಿಹೆಚ್ಚು ನೇರ ಕೊಲೆಯಂತ ಕ್ರಮಕ್ಕೆ ಮುಂದಾಗುತ್ತಾರೆ.

ಪ್ರೀತಿ ಬದುಕಿಗೆ ಅಮೃತದಷ್ಟೇ ಮಹತ್ವ ಹೊಂದಿದೆ. ಹಾಗೆಯೇ ಅದು ಬಹಳಷ್ಟು ಸಲ ಅಫೀಮಿನ ಅಮಲಿನಂತೆ ನಮ್ಮಿಂದ ತಪ್ಪು ಮಾಡಿಸುತ್ತದೆ.

ಪ್ರೀತಿಯ ಮಡಿಲಿನಲ್ಲಿ ಭೂಮಿಯೇ ಸ್ವರ್ಗ, ವಿರಹದ ತಾಪದಲ್ಲಿ ಈ ನಿಂತ ನೆಲವೇ ನರಕ.

ಯಾವ ತತ್ವಜ್ಞಾನವೂ, ಯಾವ ವೇದಾಂತವೂ, ಯಾವ ಹಿತನುಡಿಗಳೂ ಪ್ರೀತಿಗೆ ಸರಸಾಟಿಯಲ್ಲ.

ನಮ್ಮ ದೇಹಕ್ಕಿಂತ ಪ್ರೀತಿಸಿದವರ ದೇಹ ಮನಸ್ಸುಗಳು ಮೇಲೆಯೇ ಹೆಚ್ಚಿನ ಅಭಿಮಾನ, ಮೋಹ, ನನ್ನದೆಂಬ ಸ್ವಾರ್ಥ ಮತ್ತು ನಿಯಂತ್ರಣ ಹೊಂದಲು ಪ್ರೀತಿ ತಹತಹಿಸುತ್ತದೆ. ಅದರ ಪರಿಣಾಮವೇ ಹಿಂಸೆ.

ಪ್ರೀತಿಯ ಆಳಕ್ಕೆ ಇಳಿದವರಿಗೆ ಮಾತ್ರ ಇದು ಅನ್ವಯಿಸುತ್ತದೆ. ಪ್ರೀತಿಯ ದಾರಿಯಲ್ಲಿ ಸ್ವಲ್ಪ ದೂರ ಸಾಗಿ ಅದರಿಂದ ವಿಮುಖರಾದವರಿಗೆ ಇದು ಅಷ್ಟಾಗಿ ಅರ್ಥವಾಗುವುದಿಲ್ಲ.
ತಾಯಿ – ಮಗುವಿನ, ಅಣ್ಣ – ತಂಗಿಯ, ಅಕ್ಕ – ತಮ್ಮನ, ಗಂಡ – ಹೆಂಡತಿಯ ಪ್ರೀತಿಯನ್ನು ಇದಕ್ಕೆ ಹೋಲಿಸಲಾಗುವುದಿಲ್ಲ. ಏಕೆಂದರೆ ಇಲ್ಲಿ ಸ್ವಾರ್ಥ, ಅವಲಂಬನೆ, ಅವಕಾಶ, ಜವಾಬ್ದಾರಿ, ಸಾಮಾಜಿಕ ಕಟ್ಟಳೆ ಇರುತ್ತದೆ.

ಆದರೆ,
ಪ್ರೇಮ – ಪ್ರೀತಿಯ ಉತ್ಕಟತೆ..

ಪ್ರೀತಿ ನಿರಂತರತೆಯನ್ನು ಬೇಡುತ್ತದೆ.
ಪ್ರೀತಿ ಏರಿಕೆಯ ರೂಪದ ಸ್ಪಂದನೆಯನ್ನು ಬಯಸುತ್ತದೆ.
ಪ್ರೀತಿ ಮುಖವಾಡವನ್ನು ಬಯಲು ಮಾಡಿ ಸಹಜತೆಯನ್ನು ತೋರಿಸುತ್ತದೆ.

ಸಿಕ್ಕರೆ ಅಮೃತ,
ಸಿಗದಿದ್ದರೆ ವಿಷ,
ಯಶಸ್ವಿಯಾದರೆ ಸ್ವರ್ಗ,
ವಿಫಲವಾದರೆ ನರಕ….

ಪ್ರೀತಿಯೆಂಬ ಭಾವನೆ – ನೀರೆಂಬ ಜೀವರಕ್ಷಕ….

ನೀರಿನ ಅಗಾಧತೆ – ಪ್ರೀತಿಯ ಅಗಾಧತೆ ಎಷ್ಟೊಂದು ಅದ್ಭುತ.

ಇಡೀ ಭೂಂಮಂಡಲವನ್ನೇ ನಾಶಮಾಡುವ ಶಕ್ತಿ ನೀರಿಗಿದೆ.
ಇಡೀ ಬದುಕನ್ನೇ ನಾಶಮಾಡುವ ಶಕ್ತಿ ಪ್ರೀತಿಗೂ ಇದೆ.

ಭೂಮಂಡಲದಲ್ಲಿ ಸರಿಸುಮಾರು ಮುಕ್ಕಾಲುಪಾಲು ನೀರೇ ಆಕ್ರಮಿಸಿಕೊಂಡಿದ್ದರೆ ಜೀವನದಲ್ಲಿ ಹೆಚ್ಚುಕಡಿಮೆ ಅಷ್ಟೇ ಪ್ರಮಾಣದಲ್ಲಿ ಪ್ರೀತಿಯೂ ಆವರಿಸಿರುತ್ತದೆ.

ನೀರು ತನ್ನ ಒಡಲಾಳದಲ್ಲಿ ಊಹಿಸಲಸಾಧ್ಯ ಕುತೂಹಲವನ್ನು ಉಳಿಸಿಕೊಂಡಿದ್ದರೆ ಪ್ರೀತಿ ಅದಕ್ಕಿಂತಲೂ ಮಿಗಿಲಾದ ಕೌತುಕಗಳನ್ನು ಅಡಗಿಸಿಕೊಂಡಿದೆ.

ನೀರಿನ ಆಳ ಅಗಲಗಳ ಅಗಾಧತೆ ಇನ್ನೂ ಮನುಷ್ಯನಿಗೆ ಬೇದಿಸಲಾಗಿಲ್ಲ. ಹಾಗಯೇ ಪ್ರೀತಿಯ ಮರ್ಮ ಯಾವ ತತ್ವಜ್ಞಾನಿಗೂ ನಿಲುಕಿಲ್ಲ.

ನೀರು ತನ್ನ ಮೂಲದಲ್ಲಿ ಶುಧ್ಧ – ಶುಭ್ರ – ಸ್ವಚ್ಚ ಹಾಗು ಬಣ್ಣವಿಲ್ಲದ, ವಾಸನೆಯಿಲ್ಲದ, ರುಚಿಯಿಲ್ಲದ ನಿರಾಕಾರ ಗುಣ ಹೊಂದಿದೆ.
ಹಾಗೆ ಪ್ರೀತಿಯೂ ಮೂಲದಲ್ಲಿ ನಿಷ್ಕಲ್ಮಶವೆ.
ಅದೇ ನೀರು ಮಲಿನಗೊಂಡಲ್ಲಿ ಅದನ್ನು ಕುಡಿದರೆ ದೇಹ ರೋಗರುಜಿನಗಳಿಗೆ ತುತ್ತಾಗಿ ಸಾವು ಸಂಭವಿಸುತ್ತದೆ. ಹಾಗೆಯೇ ಪ್ರೀತಿಯಲ್ಲಿ ಮೋಸವಾದರೆ ಜೀವನವೇ ದಾರಿ ತಪ್ಪುತ್ತದೆ ಮತ್ತು ಸಾವು ಬೇಗ ಅಪ್ಪಿಕೊಳ್ಳುತ್ತದೆ.

ನೀರಿನ ಏರಿಳಿತ – ರಭಸ – ಹರಿಯುವ ದಿಕ್ಕು – ಭೋರ್ಗರೆತ – ಪ್ರಶಾಂತತೆ – ಸೌಂದರ್ಯ – ಗಲೀಜು -ಅಸಹ್ಯ – ದುರ್ವಾಸನೆ ಎಲ್ಲವೂ ಪ್ರೀತಿಯಲ್ಲೂ ಅಡಕವಾಗಿದೆ.

ನೀರು ಕಡಿಮೆಯಾದರೆ ಬದುಕುವುದು ಕಷ್ಟವಾಗುತ್ತದೆ. ಹೆಚ್ಚಾದರೆ ಆಗಲೂ ದುಷ್ಪರಿಣಾಮ ಬೀರುತ್ತದೆ.
ಪ್ರೀತಿಯೂ ಅಷ್ಟೆ.ಅದು ಕಡಿಮೆಯಾದರೆ ಜೀವನ ಬೇಸರವಾಗುತ್ತದೆ ಹೆಚ್ಚಾದರೆ ಆ ಒತ್ತಡ ತಡೆಯಲಾಗುವುದಿಲ್ಲ.

ಅತ್ಯಂತ ದುರ್ಭರ ಸ್ಥಿತಿಯಲ್ಲಿ ಒಂದು ಗುಟುಕು ನೀರು ನಮ್ಮ ಜೀವವನ್ನೇ ಉಳಿಸಬಲ್ಲದು.
ಹಾಗೆಯೇ ಅತ್ಯಂತ ಅಸಹಾಯಕ ಪರಿಸ್ಥಿತಿಯಲ್ಲಿ ಒಂದು ಸಣ್ಣ ಪ್ರೀತಿಯ ಆಸರೆ ಬದುಕಿಗೆ ಮರುಜನ್ಮವನ್ನೇ ನೀಡಬಲ್ಲದು.

ನೀರು – ಪ್ರೀತಿಯ ಹೋಲಿಕೆಯಲ್ಲಿ ಮರೆಯಾಗುತ್ತಿರುವ ನಿಜ ಪ್ರೀತಿಯ ಹುಡುಕುತ್ತಾ ………

ಹೇಳಿದಷ್ಟೂ ಇನ್ನೂ ಉದ್ದವಾಗುವ ಮುಗಿಯದ ಅಕ್ಷಯ ಪಾತ್ರೆ ಈ ಪ್ರೀತಿ‌.

  • ವಿವೇಕಾನಂದ. ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024