ಶ್ರೀರಾಮನವಮಿ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ `ಲವ್ ಕೇಸರಿ’ ಎಂಬ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ ನೀಡಿದೆ.
ರಾಯಚೂರು ನಗರದಲ್ಲಿ ನಡೆದಿದ್ದ ಕಾರ್ಯಕ್ರಮದ ವೇಳೆ ಶ್ರೀರಾಮಸೇನೆ ರಾಯಚೂರು ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ `ಲವ್ ಜಿಹಾದ್ ಬದಲು, ಲವ್ ಕೇಸರಿ ಮಾಡಿ’ ಎಂದು ಕರೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯಲ್ಲಿ ಇನ್ನುಮುಂದೆ ಯಾವುದೇ ಲವ್ ಜಿಹಾದ್ ಪ್ರಕರಣ ಬರಬಾರದು. ಹಾಗಾಗಿ ಲವ್ ಕೇಸರಿ ಮಾಡಿ, ನೀವು ಮಾಡಲೇಬೇಕು. ಲವ್ ಜಿಹಾದ್ ಹೆಸರಿನಲ್ಲಿ ನಮ್ಮ ಮನೆ ಹೆಣ್ಣುಮಕ್ಕಳನ್ನು ಮಕ್ಕಳು ಹೆರುವ ಯಂತ್ರಗಳನ್ನಾಗಿ ಮಾಡಿಕೊಂಡಿದ್ದಾರೆ. ನಮ್ಮನೆ ಹೆಣ್ಮಕ್ಕಳನ್ನು ಕರೆದುಕೊಂಡು ಹೋಗಿ ಕಪ್ಪು ಬುರ್ಕಾ ಹಾಕಿಸಿ ಬಿಸಿಲಲ್ಲಿ ತಿರುಗಾಡುವಂತೆ ಮಾಡುತ್ತಾರೆ. ಅವರನ್ನು ಹಾಗೆಯೇ ಸುಮ್ಮನೇ ಬಿಡಬೇಕಾ ಎಂದು ಪ್ರಶ್ನಿಸಿದ್ದಾರೆ.
ಕೆಲ ಮುಸ್ಲಿಮರು ಒಂದೊಂದು ವಾರ ಸ್ನಾನ ಮಾಡಲ್ಲ, ಆದ್ರೆ ಸೆಂಟ್ ಹಾಕಿಕೊಂಡು ಹೆಣ್ಮಕ್ಕಳ ಹಿಂದೆ ಓಡಾಡ್ತಾರೆ. ಆದರೆ ನಮ್ಮ ಹೆಣ್ಣುಮಕ್ಕಳಿಗೆ ಎಲ್ಲಿ ಹೇಳಿಕೊಳ್ಳಬೇಕು ಎಂಬುದು ಗೊತ್ತಿರುವುದಿಲ್ಲ. ಈ ವೇದಿಕೆ ಮೂಲಕ ಅವರಿಗೆ ಕರೆ ನೀಡುತ್ತಿದ್ದೇವೆ. ಒಂದು ವೇಳೆ ಮುಸ್ಲಿಮರು ಹಿಂದೂ ಹೆಣ್ಣುಮಕ್ಕಳಿಗೆ ತೊಂದರೆ ಕೊಟ್ಟರೆ ನಮ್ಮ ಬಳಿ ಹೇಳಿ, ಅವರ ಮರ್ಮಾಂಗವನ್ನೇ ಕತ್ತರಿಸಿ ಹಾಕೋಣ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನೀವು ಸುಮ್ಮನೆ ಒಂದು ತಲ್ವಾರ್ ಇಟ್ಟುಕೊಳ್ಳಿ. ಅವರು ನಿಮ್ಮ ಮೇಲೆ ದಾಳಿ ಮಾಡಲು ಬಂದೇ ಬರುತ್ತಾರೆ. ಆಗ ನೀವೇ ಅವರನ್ನು ಕೊಚ್ಚಿ ಹಾಕಿ ಎಂಬ ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ್ದಾರೆ.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ