ತಾನು ಕಳೆದ 6 ವರ್ಷದಿಂದ ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ನಡೆದಿದೆ.
ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಿಯಕರ ರಾಘವೇಂದ್ರ ಎಂದು ಗೊತ್ತಾಗಿದೆ.
ಈ ಜೋಡಿಗಳು ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಹುಡುಗಿ ಮನೆಯವರ ಒತ್ತಡ ಹಿನ್ನೆಲೆ ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದರು. ಮಗಳನ್ನು ಬೇರೆ ವರನೊಂದಿಗೆ ಮದುವೆ ಮಾಡಲು ಪೋಷಕರು ಹೊರಟಿರುವುದನ್ನು ಅರಿತು ಯುವಕ ಆತ್ಮಹತ್ಯೆ ಗೆ ಯತ್ನಿಸಿ, ಈಗ
ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ