ಧನುಷ್ (23), ಸುಷ್ಮಾ (22) ಮೃತ ದುರ್ದೈವಿಗಳು. ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ ಹಾಗೂ ಅರೆಹಳ್ಳಿ ಗ್ರಾಮದ ಸುಷ್ಮಾ ಕಳೆದ ಎರಡು ವರ್ಷಗಳಿಂದ ಪ್ರೀತಿಸಿ ಮದುವೆಗೆ ಮನೆಯವರನ್ನೂ ಒಪ್ಪಿಸಿ ಸಪ್ತಪದಿ ತುಳಿಯುವ ಸಿದ್ಧತೆಯಲ್ಲಿದ್ದರು.
ಇದನ್ನು ಓದಿ :ಭೀಕರ ಕಾರು ಅಪಘಾತ : ಆಸೀಸ್ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ದುರಂತ ಸಾವು
ಈ ನಡುವೆ ಮೇ 11 ರಂದು ನಡೆದ ನೆಲಮಂಗಲ ಕುಲುವನಹಳ್ಳಿ ಬಳಿ ನಡೆದ ಅಪಘಾತದಲ್ಲಿ ಧನುಷ್ ಮೃತಪಟ್ಟನು .
ಸಾವಿನ ಸುದ್ದಿಕೇಳಿ ಆಘಾತಗೊಂಡಿದ್ದ ಯುವತಿ ಸುಷ್ಮಾ, ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು. ಅಂದಿನಿಂದಲೂ ಧನುಷ್ ಸಾವಿನ ಯೋಚನೆಯಲ್ಲಿಯೇ ದುಃಖಿಸುತ್ತಿದ್ದ ಸುಷ್ಮಾ, ನಿನ್ನೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ಈ ವೇಳೆ ಕುಟುಂಬಸ್ಥರು ಆಕೆ ಚಿಕಿತ್ಸೆ ನಾಲ್ಕೈದು ಆಸ್ಪತ್ರೆಗಳಲ್ಲಿ ಸುತ್ತಿ ಚಿಕಿತ್ಸೆ ಕೊಡಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ 8 ಗಂಟೆ ಸುಮಾರಿನಲ್ಲಿ ಸಾವನ್ನಪ್ಪಿದ್ದಾಳೆ.
ಸುಷ್ಮಾ ಎಂಕಾಂ ವಿದ್ಯಾಭ್ಯಾಸ ಮಾಡುತ್ತಿದ್ದರೇ, ಧನುಷ್ ಬೆಂಗಳೂರಿನಲ್ಲಿ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದ. ಪ್ರೀತಿ ವಿಚಾರ ಗೊತ್ತಾಗಿ ಮನೆಯವರು ಇಬ್ಬರಿಗೂ ಮದುವೆ ನಿಶ್ಚಯ ಮಾಡಿದ್ದರು. ಆದರೆ ಊರಿನ ಜಾತ್ರೆಗೆ ಬರುವ ವೇಳೆ ಅಪಘಾತ ನಡೆದು ಧನುಷ್ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕುರಿತಂತೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು