ಆಸ್ಟ್ರೇಲಿಯ ಎದುರಿನ ಮೊದಲನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಟೆಸ್ಟ್ ಇತಿಹಾಸ ದಲ್ಲಿಯೇ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದೆ.
ಕೇವಲ 36 ರನ್ ಗಳಿಗೆ ಆಲ್ ಔಟ್ ಆದ ಭಾರತ ಆಸ್ಟ್ರೇಲಿಯಾ ಸುಲಭದ ಗೆಲುವಿಗೆ ಕಾರಣವಾಯಿತು. ಟೀಂ ಇಂಡಿಯಾ 90 ರನ್ ಗಳ ಅಲ್ಪ ಮೊತ್ತದ ಗುರಿ ನೀಡಿತ್ತು.
ಮೊದಲನೇ ಇನ್ನಿಂಗ್ಸ್ ನಲ್ಲಿ 53 ರನ್ ಗಳ ಮುನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ವಿರಾಟ್ ಕೊಹ್ಲಿ ಬಳಗವು 21.2 ಓವರ್ ಗಳಲ್ಲಿ ತನ್ನ ಎಲ್ಲ ವಿಕೆಟ್ ಕಳೆದುಕೊಂಡು 36 ರನ್ ಗಳನ್ನಷ್ಟೇ ಗಳಿಸಲಷ್ಟೆ ಶಕ್ತವಾಯಿತು.
ಶುಕ್ರವಾರ ಬ್ಯಾಟಿಂಗ್ ಆರಂಭಿಸಿದ ಪೃಥ್ವಿಶಾ 4 ರನ್ ಗಳಿಸಿ ಪೆವಿಲಿಯನ್ ಸೇರಿದ್ದರು. ಮೊದಲನೇ ಇನ್ನಿಂಗ್ಸ್ ನಲ್ಲಿ 17 ರನ್ ಕಲೆ ಹಾಕಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ 40 ಎಸೆತಗಳನ್ನು ಎದುರಿಸಿ 9 ರನ್ ಗಳಿಸಿ ಪೆವಿಲಿಯನ್ ಸೇರಿ ಕಳಪೆ ಬ್ಯಾಟಿಂಗ್ ಮುಂದುವರಿಸಿದರು.
ಭಾರತದ ಆಟಗಾರರು ಎರಡಂಕಿ ದಾಟದೆ ಪೆವಿಲಿಯನ್ ಸೇರಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಬೌಲರ್ ಬೂಮ್ರಾ 2, ಟೆಸ್ಟ್ ಪರಿಣಿತರಾದ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಶೂನ್ಯಕ್ಕೆ ನಿರ್ಗಮಿಸಿದರು.
ಮೊದಲನೇ ಇನ್ನಿಂಗ್ಸ್ ನಲ್ಲಿ ಅರ್ಧಶತಕ ಸಿಡಿಸಿದ್ದ ನಾಯಕ ವಿರಾಟ್ ಕೊಹ್ಲಿ 4, ಹನುಮಾನ್ ವಿಹಾರಿ 8, ವೃದ್ಧಿಮಾನ್ ಸಹಾ 4, ಅಶ್ವಿನ್ 0, ಉಮೇಶ್ ಯಾದವ್ 4.ಅಂತಿಮವಾಗಿ ಟೀಂ ಇಂಡಿಯಾ 36ರನ್ ಗೆ ತನ್ನೆಲ್ಲ ವಿಕೇಟ್ ಗಳನ್ನು ಕಳೆದುಕೊಂಡು ಆಸ್ಟ್ರೇಲಿಯ ಸುಲಭದ ಗೆಲುವಿಗೆ ಕಾರಣವಾಯಿತು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment