Main News

ಮಾ.27 ಮೆಗಾ ಲೋಕ ಅದಲಾತ್: ನೊಂದಣಿಗೆ ಮಾ.26 ಕೊನೆ ದಿನ

ರಾಮನಗರ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಮಾಚ್೯ 27 ರಂದು ನಡೆಯುವ ಮೆಗಾ ಲೋಕ ಅದಾಲತ್ ಗಾಗಿ ಮಾಚ್೯ 26 ವರೆಗೆ ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ. ಜಿ. ರಮಾ ತಿಳಿಸಿದ್ದಾರೆ.

ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯಾದ್ಯಂತ ಇರುವ 18 ಬೆಂಚ್ ಗಳಲ್ಲಿ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ. ರಾಜಿ ಸಂಧಾನದ ಮೂಲಕ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ. ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಬಿ.ಜಿ. ರಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆನ್ ಲೈನ್ :

ರಾಮನಗರ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಮಾಚ್೯ 27 ರಂದು ಏಕ ಕಾಲಕ್ಕೆ ಮೆಗಾ ಲೋಕ ಅದಾಲತ್ ನಡೆಯಲಿದೆ. ಕಕ್ಷಿದಾರರು ಹಾಗೂ ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ಖುದ್ದಾಗಿ ಭಾಗವಹಿಸಬಹುದು ಇಲ್ಲವೆ ಆನ್ ಲೈನ್ ಮೂಲಕವೂ ಭಾಗವಹಿಸಬಹುದು ಎಂದು ಸತ್ರ ನ್ಯಾಯಾಧೀಶರು ತಿಳಿಸಿದರು.

ರಾಜಿ ಪ್ರಕರಣಗಳು:

ಜಿಲ್ಲೆಯಲ್ಲಿ ಒಟ್ಟು 43,108 ಪ್ರಕರಣಗಳು ಬಾಕಿ ಇದ್ದು, ಇವುಗಳನ್ನು ಮೆಗಾ ಲೋಕ ಅದಾಲತ್ ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥ ಪಡಿಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಕರಣಗಳ ರಾಜಿಗೆ ಒತ್ತು:

ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳಾದ ಅಪಘಾತ, ಕಂತು ಕಟ್ಟದಿರುವುದು, ಪರಿಹಾರ ವ್ಯಾಜ್ಯ, ಆಸ್ತಿ ಸಂಬಂಧಿತ, ಕೌಟುಂಬಿಕ ಪ್ರಕರಣ, ವಿಮೆ, ಹಣಕಾಸು ವ್ಯಾಜ್ಯ, ಸಣ್ಣ ಪುಟ್ಟ ಸಿವಿಲ್ ವ್ಯಾಜ್ಯ, ಲೇವಾದೇವಿ, ಬಾಡಿಗೆ, ಅಪಘಾತ ಪರಿಹಾರ, ವಾಹನ ವಿಮಾ ಕಂತು ಬಾಕಿ, ಭೂಮಿ ಖರೀದಿ ಸಂಬಂಧಿತ ಪ್ರಕರಣಗಳನ್ನು ರಾಜಿಗಾಗಿ ನಿಗದಿಪಡಿಸಲಾಗಿದೆ ಎಂದು ವೆಂಕಟಪ್ಪ ಹೇಳಿದ್ದಾರೆ

ಮಾಚ್೯ 27 ರಂದು ಆನ್ ಲೈನ್ ಮೂಲಕ ಅಥವಾ ಖುದ್ದಾಗಿ ಭಾಗವಹಿಸಿ ಪ್ರಕರಣ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ನ್ಯಾಯಾಲಯಕ್ಕೆ ಬರದೇ ಒಂದೇ ಒಂದು ಬಾರಿಗೆ ನ್ಯಾಯಸಮ್ಮತವಾಗಿ ರಾಜಿ ಇಲ್ಲವೆ ಸಂಧಾನದ ಮೂಲಕ ಇವುಗಳನ್ನು ಹೆಚ್ಚಿನ ಶುಲ್ಕವಿಲ್ಲದೆ ಎರಡೂ ಕಡೆಯವರು ಆನ್ ಲೈನ್ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024